ADVERTISEMENT

ರಾಮನಗರ: ಡಿಕೆಶಿ ಕುಟುಂಬಕ್ಕೆ ಐ.ಟಿ. ಇಲಾಖೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 3 ಜನವರಿ 2019, 10:46 IST
Last Updated 3 ಜನವರಿ 2019, 10:46 IST
   

ರಾಮನಗರ: ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಆದಾಯ ತೆರಿಗೆ ಇಲಾಖೆಯು ಸಚಿವ ಡಿ.ಕೆ. ಶಿವಕುಮಾರ್ ಅವರ ತಾಯಿ ಗೌರಮ್ಮ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಹಿಂದಿನ ವಿಚಾರಣೆಗೆ ಗೌರಮ್ಮ ಅವರು ತೆರಳಿರಲಿಲ್ಲ. ಈ ಹಿನ್ನೆಲೆಯಲ್ಲಿ ಈ ನೋಟಿಸ್ ಜಾರಿಯಾಗಿದೆ ಎನ್ನಲಾಗಿದೆ. ಅಧಿಕಾರಿಗಳು ನೋಟಿಸ್ ಹಿಡಿದು ಬಂದ ಸಂದರ್ಭದಲ್ಲಿ ಗೌರಮ್ಮ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿಯ ತಮ್ಮ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಅಧಿಕಾರಿಗಳು ಅವರ ಮನೆಯ ಬಾಗಿಲಿಗೆ ನೋಟಿಸ್ ಅಂಟಿಸಿ ಹೋಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.