ರಾಮನಗರ: ಕನಕಪುರ ತಾಲ್ಲೂಕು ಕಚೇರಿಗೆ ಗುರುವಾರ ನಾಲ್ವರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ದಾಖಲೆಗಳ ಪರಿಶೀಲನೆ ನಡೆಸಿದೆ.
ಸಚಿವ ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಅವರ ಕುಟುಂಬಕ್ಕೆ ಸೇರಿದ ಜಮೀನುಗಳ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.
ಈ ಹಿಂದೆಯೂ ಐ.ಟಿ. ಅಧಿಕಾರಿಗಳ ತಂಡವು ಕನಕಪುರ ತಾಲ್ಲೂಕು ಕಚೇರಿ ಮೇಲೆ ದಾಳಿ ನಡೆಸಿ ಡಿಕೆಶಿ ಕುಟುಂಬದ ಆಸ್ತಿಗಳ ವಿವರ ಕಲೆ ಹಾಕಿತ್ತು.
ಇನ್ನಷ್ಟು ಓದು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.