ADVERTISEMENT

ಐ.ಟಿ. ಅಧಿಕಾರಿಗಳ ವಿರುದ್ಧ ದೂರು: ರಮೇಶ್ ಸಹೋದರ

ಹುಟ್ಟೂರಲ್ಲಿ ರಮೇಶ್ ಅಂತ್ಯಕ್ರಿಯೆ: ಪರಮೇಶ್ವರ್ ಭಾಗಿ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2019, 7:06 IST
Last Updated 13 ಅಕ್ಟೋಬರ್ 2019, 7:06 IST
 ರಮೇಶ್ ಅಂತ್ಯಕ್ರಿಯೆಯು‌ ಭಾನುವಾರ ಮಧ್ಯಾಹ್ನ ಅವರ ಹುಟ್ಟೂರಾದ ರಾಮನಗರ ತಾಲ್ಲೂಕಿನ ಮೆಳೆಹಳ್ಳಿ ಗ್ರಾಮದಲ್ಲಿ ನಡೆಯಿತು
ರಮೇಶ್ ಅಂತ್ಯಕ್ರಿಯೆಯು‌ ಭಾನುವಾರ ಮಧ್ಯಾಹ್ನ ಅವರ ಹುಟ್ಟೂರಾದ ರಾಮನಗರ ತಾಲ್ಲೂಕಿನ ಮೆಳೆಹಳ್ಳಿ ಗ್ರಾಮದಲ್ಲಿ ನಡೆಯಿತು   

ರಾಮನಗರ: 'ನನ್ನ ಸಹೋದರ ರಮೇಶ್ ಅವರನ್ನು ಐ.ಟಿ. ಅಧಿಕಾರಿಗಳು ಮನೆಗೆ ಬಂದು ವಿಚಾರಣೆ ನಡೆಸಿರುವುದಕ್ಕೆ ಸಿಸಿಟಿವಿ ಸಾಕ್ಷ್ಯ ಇದೆ. ಈ ಬಗ್ಗೆ ದೂರು ದಾಖಲಿಸುತ್ತೇನೆ' ಎಂದು ಡಾ. ಜಿ. ಪರಮೇಶ್ವರ್ ಆಪ್ತ ಕಾರ್ಯದರ್ಶಿ ರಮೇಶ್ ಸಹೋದರ ಸತೀಶ್ ತಿಳಿಸಿದರು.

ಭಾನುವಾರ ಸಹೋದರನ ಅಂತ್ಯಕ್ರಿಯೆ ಸಂದರ್ಭ ಮಾಧ್ಯಮದವರ ಜೊತೆ ಮಾತನಾಡಿದ ಅವರು 'ಐ.ಟಿ. ಅಧಿಕಾರಿ ಬಂದಿರುವುದಕ್ಕೆ ನಮ್ಮಲ್ಲಿ ಸಾಕ್ಷ್ಯ ಇದೆ‌. ವಿಚಾರಣೆ ನಡೆಸಿಲ್ಲ ಅಂತ ಅಧಿಕಾರಿಗಳು ಸುಳ್ಳು ಹೇಳಿದ್ದಾರೆ. ಐ.ಟಿ. ದಾಳಿ ಆದಾಗಿನಿಂದ ಸಹೋದರ ನನ್ನ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಪರಮೇಶ್ವರ್ ಅವರಮನೆಗೆ ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಕ್ಕೆ ಐ.ಟಿ. ಕಿರುಕುಳವೇ ಕಾರಣ' ಎಂದು ದೂರಿದರು.

ಹುಟ್ಟೂರಲ್ಲಿ ರಮೇಶ್ ಅಂತ್ಯಕ್ರಿಯೆ: ಪರಮೇಶ್ವರ್ ಭಾಗಿ

ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದ ರಮೇಶ್ ಅಂತ್ಯಕ್ರಿಯೆಯು‌ ಭಾನುವಾರ ಮಧ್ಯಾಹ್ನ ಅವರ ಹುಟ್ಟೂರಾದ ರಾಮನಗರ ತಾಲ್ಲೂಕಿನ ಮೆಳೆಹಳ್ಳಿ ಗ್ರಾಮದಲ್ಲಿ ನಡೆಯಿತು. ಶಾಸಕ ಡಾ.ಜಿ.ಪರಮೇಶ್ವರಪಾಲ್ಗೊಂಡುತಮ್ಮ ಆಪ್ತ ಕಾರ್ಯದರ್ಶಿಗೆ ಅಂತಿಮ‌ ನಮನ ಸಲ್ಲಿಸಿದರು.

ಗ್ರಾಮದಲ್ಲಿ ಮೆರವಣಿಗೆ ಮೂಲಕ ಶವ ಕೊಂಡೊಯ್ದು ಅವರ ಜಮೀನಿನಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ನೂರಾರು ಮಂದಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.