ADVERTISEMENT

ನಿರುದ್ಯೋಗಿಗಳಿಗೆ ಉದ್ಯೋಗ; ದೆಹಲಿಯಲ್ಲಿ ಜಗದೀಶ್‌.ಕೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2019, 14:28 IST
Last Updated 13 ಫೆಬ್ರುವರಿ 2019, 14:28 IST
ಕೀರಣಗೆರೆ ಜಗದೀಶ್‌.ಕೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ ಸುಷ್ಮ ಸ್ವರಾಜ್‌
ಕೀರಣಗೆರೆ ಜಗದೀಶ್‌.ಕೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ ಸುಷ್ಮ ಸ್ವರಾಜ್‌   

ಕನಕಪುರ: ತಾಲ್ಲೂಕಿನ ಕೀರಣಗೆರೆ ಚಾಕಿ ಸಾಕಾಣಿಕೆ ಕೇಂದ್ರದ ಜಗದೀಶ್‌ ಕೆ. ಗ್ರಾಮಾಂತರ ಪ್ರದೇಶದಲ್ಲಿನ ವಿದ್ಯಾವಂತ ಒಂದು ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿಕೊಟ್ಟಿರುವುದನ್ನು ಕೇಂದ್ರ ಸರ್ಕಾರವು ಗುರುತಿಸಿ ದೆಹಲಿಯಲ್ಲಿನ ವಿಜ್ಙಾನ ಭವನದಲ್ಲಿ ಸನ್ಮಾನಿಸಿ ಗೌರವಿಸಿತು.

ಕೇಂದ್ರದ ಜವಳಿ ಸಚಿವೆ ಸ್ಮೃತಿ ಇರಾನಿ, ವಿದೇಶಾಂಗ ಸಚಿವೆ ಸುಷ್ಮ ಸ್ವರಾಜ್‌, ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಜಗದೀಶ್‌ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು. ಈಚೆಗೆ ದೆಹಲಿಯ ವಿಜ್ಙಾನ ಭವನದಲ್ಲಿ ಅಭಿನಂದನೆ ಸಮಾರಂಭ ನಡೆಯಿತು.

ಸಂತಸ: ಕುಗ್ರಾಮವೊಂದರಲ್ಲಿ ಚಾಕಿ ಸಾಕಾಣಿಕೆ ಕೇಂದ್ರವನ್ನು ತೆರೆದು, ಅದರ ಮೂಲಕ ರೈತರಿಗೆ ಅನುಕೂಲವಾಗುವಂತೆ ಮತ್ತು ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶ ನೀಡಿರುವುದನ್ನು ಗುರುತಿಸಿ ಕೇಂದ್ರ ಸರ್ಕಾರವು ಸನ್ಮಾನಿಸಿರುವುದು ಸಂತಸವನ್ನು ತಂದಿದೆ ಎಂದು ಜಗದೀಶ್‌ ಕೆ. ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.