ರಾಮನಗರ: ಇಲ್ಲಿನ ತಾಲ್ಲೂಕು ಆಡಳಿತ ಸೌಧದ ಆವರಣದಲ್ಲಿ ಆಯೋಜಿಸಿರುವ ಜನಸ್ಪಂದನ ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವರೇ ಗೈರಾಗಿದ್ದು, ಜನರು ಕಾದು ಕುಳಿತಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ಜನರ ಅಹವಾಲು ಆಲಿಸಲು ಸಭೆ ಆಯೋಜಿಸಲಾಗಿದೆ. ಬೆಳಿಗ್ಗೆ 10ಕ್ಕೆ ಸಭೆ ನಿಗದಿ ಆಗಿದೆ. ಇದೇ ಮೊದಲ ಬಾರಿಗೆ ಸಚಿವರ ಅಧ್ಯಕ್ಷತೆಯಲ್ಲಿ ಇಂತಹ ಸಭೆ ಆಯೋಜಿಸಲಾಗಿದೆ. ಆದರೆ ಬೆಂಗಳೂರಿನಲ್ಲಿ ಅನ್ಯ ಸಭೆಗಳ ನಿಮಿತ್ತ ಸಚಿವರು ಗೈರಾಗಿದ್ದಾರೆ. ಶಾಸಕಿ ಅನಿತಾ ಕುಮಾರಸ್ವಾಮಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
ಜನಸ್ಪಂದನ ಸಭೆಗಾಗಿ ಜಿಲ್ಲಾಡಳಿತ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದು, ಹೊರಗೆ ವಿವಿಧ ಇಲಾಖೆಗಳ ಮಳಿಗೆಗಳನ್ನೂ ಹಾಕಲಾಗಿದೆ. ಜನರೂ ಸಾಕಷ್ಟು ಸಂಖ್ಯೆಯಲ್ಲಿ ಬಂದಿದ್ದು, ಜನಪ್ರತಿನಿಧಿಗಳಿಗಾಗಿ ಕಾಯತೊಡಗಿದ್ದಾರೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.