ADVERTISEMENT

ಜಯರತ್ನಾ ನೂತನ ಉಪಾಧ್ಯಕ್ಷೆ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2020, 16:15 IST
Last Updated 18 ನವೆಂಬರ್ 2020, 16:15 IST
ಜಯರತ್ನಾ ಅವರನ್ನು ಸಹ ಸದಸ್ಯರು ಹಾಗೂ ಕುಟುಂಬದವರು ಅಭಿನಂದಿಸಿದರು
ಜಯರತ್ನಾ ಅವರನ್ನು ಸಹ ಸದಸ್ಯರು ಹಾಗೂ ಕುಟುಂಬದವರು ಅಭಿನಂದಿಸಿದರು   

ರಾಮನಗರ: ಇಲ್ಲಿನ ಜಿಲ್ಲಾ ಪಂಚಾಯಿತಿಯ ನೂತನ ನೂತನ ಉಪಾಧ್ಯಕ್ಷೆಯಾಗಿ ಕೋಡಿಹಳ್ಳಿ ಕ್ಷೇತ್ರದ ಸದಸ್ಯೆ ಡಿ.ಎಚ್. ಜಯರತ್ನಾ ಅವಿರೋಧವಾಗಿ ಆಯ್ಕೆಯಾದರು.

ನಗರದ ಜಿಲ್ಲಾ ಪಂಚಾಯಿತಿ ಭವನದಲ್ಲಿ ಬುಧವಾರ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಿದ್ದು, ಈ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಡಿ.ಎಚ್. ಜಯರತ್ನಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಅವರ ನಾಮಪತ್ರ ಕ್ರಮಬದ್ಧವಾಗಿದ್ದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ನವೀನ್ ರಾಜ್ ಸಿಂಗ್ ಅವಿರೋಧ ಆಯ್ಕೆಯನ್ನು ಘೋಷಿಸಿದರು.

ಚುನಾವಣಾ ಪ್ರಕ್ರಿಯೆಯಲ್ಲಿ ಒಟ್ಟು18 ಸದಸ್ಯರು ಪಾಲ್ಗೊಂಡರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್‌.ಎನ್. ಅಶೋಕ್‌, ಹೆಚ್ಚುವರಿ ಪ್ರಾದೇಶಿಕ ಆಯುಕ್ತೆ ಕೆ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ, ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಇದ್ದರು.

ADVERTISEMENT

ಈ ಸಂದರ್ಭ ನೂತನ ಉಪಾಧ್ಯಕ್ಷೆ ಜಯರತ್ನಾ ಮಾತನಾಡಿ "ಶಾಸಕ ಡಿ.ಕೆ. ಶಿವಕುಮಾರ್‍, ಸಂಸದ ಡಿ.ಕೆ. ಸುರೇಶ್ ಹಾಕಿಕೊಟ್ಟಿರುವ ಹಾದಿಯಲ್ಲೇ ಕೆಲಸ ಮಾಡುತ್ತೇನೆ. ಸಾರ್ವಜನಿಕರ ಕೆಲಸಕ್ಕೆ ಒತ್ತು ಕೊಟ್ಟು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಹಯೋಗದೊಂದಿಗೆ ಸರ್ಕಾರದ ಯೋಜನೆಗಳು ಜನಸಾಮಾನ್ಯರನ್ನು ತಲುಪುವಂತೆ ಮಾಡುತ್ತೇನೆ’ ಎಂದರು.

ವಿಧಾನ ಪರಿಷತ್ ಸದಸ್ಯ ಎಸ್‌. ರವಿ, ಜಿ.ಪಂ. ಸದಸ್ಯರು, ಮಾಜಿ ಅಧ್ಯಕ್ಷ ಇಕ್ಬಾಲ್‌ ಹುಸೇನ್‌ ಮತ್ತಿತರರು ಜಯರತ್ನಾ ಅವರನ್ನು ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.