ADVERTISEMENT

ಜಲಧಾರೆ ವಾಹನಗಳಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 8:26 IST
Last Updated 12 ಏಪ್ರಿಲ್ 2022, 8:26 IST

ರಾಮನಗರ: ಇಲ್ಲಿನ ಚಾಮುಂಡೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಸುವ ಮೂಲಕ ಮಂಗಳವಾರ ಜಲಧಾರೆ ಅಭಿಯಾನದ ರಥಗಳ ಸಂಚಾರಕ್ಕೆ ಚಾಲನೆ ನೀಡಲಾಯಿತು.

ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರ ಗೈರಿನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಚಾಲನೆ ನೀಡಿದರು.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ‌.‌ ಕುಮಾರಸ್ವಾಮಿ, ಜನ ದರ್ಗಾ ಹಾಗೂ ಚರ್ಚ್ ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾವೇಶ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.