ADVERTISEMENT

ಜೆಡಿಎಸ್- ಬಿಜೆಪಿ ಪಾದಯಾತ್ರೆ: ಹೃದಯಾಘಾತದಿಂದ ಜೆಡಿಎಸ್ ಕಾರ್ಯಕರ್ತೆ ಸಾವು

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2024, 9:49 IST
Last Updated 5 ಆಗಸ್ಟ್ 2024, 9:49 IST
   

ರಾಮನಗರ: ಮುಡಾ ಹಗರಣ ವಿರೋಧಿಸಿ ಜೆಡಿಎಸ್- ಬಿಜೆಪಿ ನಡೆಸುತ್ತಿರುವ ಜಂಟಿ ಪಾದಯಾತ್ರೆಯಲ್ಲಿ ಜೆಡಿಎಸ್ ಕಾರ್ಯಕರ್ತೆ ಬೆಂಗಳೂರು ಮೂಲದ ಗೌರಮ್ಮ ಎಂಬಾಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿದ್ದ ಮೃತರ ಅಂತಿಮ‌ ದರ್ಶನವನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪಡೆದುಕೊಂಡಿದ್ದಾರೆ.

ಇದೇ ವೇಳೆ ಮತ್ತೊಬ್ಬ ಪಾದಯಾತ್ರಿ ಸಹ ವಾಂತಿ ಮಾಡಿಕೊಂಡು ಆಸ್ವಸ್ಥರಾಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.