ADVERTISEMENT

ಕನಕಪುರ: ವಿಷಸೇವಿಸಿದ್ದ ಡಿಕೆಶಿ ನಗರದ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 17 ಜನವರಿ 2024, 16:07 IST
Last Updated 17 ಜನವರಿ 2024, 16:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕನಕಪುರ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಲೂಕಿನ ಉಯ್ಯಂಬಳ್ಳಿ ಹೋಬಳಿ ಡಿಕೆಶಿ ನಗರದ ವಾಸಿ ಮಹದೇವ (35) ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

 ಜ.12 ರಂದು ಮನೆಯಲ್ಲಿ ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದರು. ಸಂಬಂಧಿಕರು ತಕ್ಷಣ ಅವರನ್ನು ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದರು.

ಹೆಚ್ಚಿನ ಚಿಕಿತ್ಸೆಗಾಗಿ ಹಾರೋಹಳ್ಳಿ ಬಳಿಯ ದಯಾನಂದ ಸಾಗರ್ ಆಸ್ಪತ್ರೆಗೆ ದಾಖಲಿಸಿದ್ದರು. ಸಾತನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.