ಕನಕಪುರ: ಇಲ್ಲಿನ ನಗರಸಭೆ ವ್ಯಾಪ್ತಿಯ 5ನೇ ವಾರ್ಡಿಗೆ ನಡೆಯುತ್ತಿರುವ ಉಪಚುನಾವಣೆಗೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಹಾಗೂ ಇಬ್ಬರು ಪಕ್ಷೇತರರು ಸೇರಿ 5 ಮಂದಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಶುಕ್ರವಾರ ಕೊನೆಯ ದಿನವಾಗಿತ್ತು. ಕಾಂಗ್ರೆಸ್ನಿಂದ ಚಾಮರಾಜು, ಬಿಜೆಪಿಯಿಂದ ಶಿವರುದ್ರ, ಜೆಡಿಎಸ್ನಿಂದ ಲೋಕೇಶ್, ಪಕ್ಷೇತರರಾಗಿ ಚಿಕ್ಕಬೋರಪ್ಪ ಮತ್ತು ಭೈರಪ್ಪ ನಾಮಪತ್ರ ಸಲ್ಲಿಸಿದ್ದಾರೆ.
ಶನಿವಾರ ನಾಮಪತ್ರ ಪರಿಶೀಲನೆ ನಡೆಯಲಿದೆ. ಅನರ್ಹ ನಾಮಪತ್ರ ತಿರಸ್ಕರಿಸಲಾಗುವುದು. ನಾಮಪತ್ರ ವಾಪಸ್ಗೆ ಡಿ. 18 ಕೊನೆಯ ದಿನವಾಗಿದೆ ಎಂದು ಚುನಾವಣಾ ಅಧಿಕಾರಿಯಾಗಿ ಸಿ.ಎಸ್. ರಾಜು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.