ಬಂಧನ
(ಪ್ರಾತಿನಿಧಿಕ ಚಿತ್ರ)
ಕನಕಪುರ: ತಾಲ್ಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೇವಿನಮರದೊಡ್ಡಿಯಲ್ಲಿ ಜೂನ್ 21 ರಂದು ನಡೆದಿದ್ದ ಕಳ್ಳತನ ಪ್ರಕರಣವನ್ನು ಕೋಡಿಹಳ್ಳಿ ಪೊಲೀಸರು ಬೇಧಿಸಿ ಆರೋಪಿಯನ್ನು ಬಂಧಿಸಿ ಅತನಿಂದ ₹2.5 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಬೇವಿನಮರದೊಡ್ಡಿ ಗ್ರಾಮದ ಅರುಣ್ (25) ಬಂಧಿತ ಆರೋಪಿ. ಬೇವಿನಮರದೊಡ್ಡಿ ಗ್ರಾಮದ ವೀಣಾ ಲೋಕೇಶ್ ಅವರ ಮನೆಯಲ್ಲಿ ಒಂದು ತಿಂಗಳ ಹಿಂದೆ ಕಳ್ಳತನವಾಗಿತ್ತು. ಜಮೀನಿನಲ್ಲಿದ್ದ ಜಾನುವಾರುಗಳನ್ನು ಮನೆಗೆ ಕರೆತರಲು ಹೋದಾಗ ಕಳವಾಗಿತ್ತು. ಈ ಬಗ್ಗೆ ಕೋಡಿಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರನ್ನು ದಾಖಲಿಸಿಕೊಂಡಿದ್ದ ಪೊಲೀಸರು ಅನುಮಾನದಿಂದ ಓಡಾಡುತ್ತಿದ್ದ ಅರುಣ್ನನ್ನು ಜುಲೈ 24ರಂದು ವಶಕ್ಕೆ ಪಡೆದು ವಿಚರಣೆ ನಡೆಸಿದಾಗ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.
ಪೊಲೀಸರು ಆರೋಪಿಯಿಂದ ₹2.5 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಎಸ್ಐ ಪ್ರದೀಪ್ ಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕಾನ್ಸ್ಟೆಬಲ್ ಧನಂಜಯ, ಕೈಲಾಸ್, ಗಿರೀಶ್, ಅರುಣ್ ಕುಮಾರ್ ಮತ್ತು ಮಲ್ಲೇಶ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.