ADVERTISEMENT

ಡಿಕೆಎಸ್ ಚಾರಿಟಬಲ್ ಟ್ರಸ್ಟ್‌: ಜಿಲ್ಲಾ ಮಟ್ಟದ ಕನಕೋತ್ಸವಕ್ಕೆ ಅದ್ದೂರಿ ತೆರೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2026, 5:25 IST
Last Updated 2 ಫೆಬ್ರುವರಿ 2026, 5:25 IST
ಕನಕಪುರ ಕನಕೋತ್ಸವ ಕಾರ್ಯಕ್ರಮಕ್ಕೆ ಬಂದಿದ್ದ ಉಪೇಂದ್ರ ಅವರನ್ನು ಡಿಕೆ ಶಿವಕುಮಾರ್ ಅಭಿನಂದಿಸಿದರು
ಕನಕಪುರ ಕನಕೋತ್ಸವ ಕಾರ್ಯಕ್ರಮಕ್ಕೆ ಬಂದಿದ್ದ ಉಪೇಂದ್ರ ಅವರನ್ನು ಡಿಕೆ ಶಿವಕುಮಾರ್ ಅಭಿನಂದಿಸಿದರು   

ಕನಕಪುರ: ಡಿಕೆಎಸ್ ಚಾರಿಟಬಲ್ ಟ್ರಸ್ಟ್‌ನಿಂದ ಐದು ದಿನಗಳಿಂದ ನಡೆಯುತ್ತಿರುವ ಜಿಲ್ಲಾ ಮಟ್ಟದ ಕನಕೋತ್ಸವಕ್ಕೆ ಭಾನುವಾರ ಅದ್ದೂರಿ ತೆರೆ ಬಿದ್ದಿತು.

ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ಮನೋರಂಜನ ಕಾರ್ಯಕ್ರಮಗಳೊಂದಿಗೆ ಕನಕೋತ್ಸವ ಮುಕ್ತಾಯವಾಯಿತು. ಉತ್ಸವದ ಪ್ರಯುಕ್ತ ವಿವಿಧ ಸ್ಪರ್ಧೆ ಆಯೋಜಿಸಲಾಗಿತ್ತು. 

ಕನಕೋತ್ಸವ ಕಾರ್ಯಕ್ರಮದಲ್ಲಿ ಜನರನ್ನು ಕುರಿತು ಡಿಕೆ ಶಿವಕುಮಾರ್ ಮಾತನಾಡಿದರು

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪರ್ಧೆ ವಿಜೇತರಿಗೆ ಬಹುಮಾನ, ಟ್ರೋಫಿ ಮತ್ತು ಸರ್ಟಿಫಿಕೇಟ್ ವಿತರಿಸಿದರು. 

ADVERTISEMENT

ಚಿತ್ರ ನಟ, ನಟಿಯರು, ಹಾಸ್ಯ ಕಲಾವಿದರು, ಗಾಯಕರು, ನಿರೂಪಕರು, ರಿಯಾಲಿಟಿ ಶೋ ಸ್ಪರ್ಧಿಗಳು ಹಾಡು, ಕುಣಿದು ರಂಜಿಸಿದರು. 

ಕನಕೋತ್ಸವ ಕಾರ್ಯಕ್ರಮದಲ್ಲಿ ಏರ್ಪಡಿಸಿದ್ದ ಮೆಹಂದಿ ಸ್ಪರ್ಧೆಯಲ್ಲಿ ಮೆಹಂದಿ ಬಿಡಿಸಿದ್ದನ್ನು ಡಿ ಕೆ ಸುರೇಶ್ ವೀಕ್ಷಣೆ ಮಾಡುತ್ತಿರುವುದು

ಈ ಬಾರಿ ಎರಡು ಲಕ್ಷ ಮಂದಿ ಕನಕೋತ್ಸವ ಸ್ಪರ್ಧೆಯಲ್ಲಿ ಪಾಲ್ಗೊಂಡು ಬಹುಮಾನ ಸ್ವೀಕರಿಸಿದ್ದಾರೆ ಎಂದು ಬಮೂಲ್‌ ಅಧ್ಯಕ್ಷ ಡಿ.ಕೆ. ಸುರೇಶ್ ಹೇಳಿದರು. ಈ ಬಾರಿ ಕಬ್ಬಾಳಮ್ಮ ದೇವಿಯನ್ನು ಅಂಬಾರಿಯಲ್ಲಿ ಮೆರವಣಿಗೆ ಮಾಡಲಾಯಿತು. 300 ಗ್ರಾಮ ದೇವತೆಗಳು ಒಂದೇ ಉತ್ಸವದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಪ್ರತಿದಿನ 50 ಸಾವಿರ ಕ್ಕೂ ಹೆಚ್ಚು ಜನರು ಕಾರ್ಯಕ್ರಮ ವೀಕ್ಷಿಸಿದ್ದಾರೆ ಎಂದರು.

ಮೆಹಂದಿ ಬಿಡಿಸಿರುವುದನ್ನು ಡಿಕೆ ಶಿವಕುಮಾರ್ ಮತ್ತು ಉಷಾ ಶಿವಕುಮಾರ್ ವೀಕ್ಷಣೆ ಮಾಡುತ್ತಿರುವುದು
ಮೆಹಂದಿ ಬಿಡಿಸಿರುವುದನ್ನು ವೀಕ್ಷಣೆ ಮಾಡಿದ ಡಿಕೆ ಸುರೇಶ್
ಕನಕಪುರದಲ್ಲಿ ಕನಕೋತ್ಸವ ಕಾರ್ಯಕ್ರಮದಲ್ಲಿ ಹಾಕಿರುವ ಜಾಯಿಂಟ್ ವೀಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.