ADVERTISEMENT

ರಾಮನಗರ: 17 ವರ್ಷದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್‌ ದಾಳಿ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2023, 4:22 IST
Last Updated 18 ಫೆಬ್ರುವರಿ 2023, 4:22 IST
   

ರಾಮನಗರ: ಕನಕಪುರ ನಗರದ ಬೈಪಾಸ್‌ ರಸ್ತೆ ಬಳಿ ಶುಕ್ರವಾರ ಯುವಕನೊಬ್ಬ 17 ವರ್ಷದ ವಿದ್ಯಾರ್ಥಿನಿ ಮುಖದ ಮೇಲೆ ಆ್ಯಸಿಡ್‌ ಎರಚಿದ್ದಾನೆ.

ದಾಳಿಯಲ್ಲಿ ಬಾಲಕಿಯ ಎಡಗಣ್ಣಿಗೆ ಗಾಯಗಳಾಗಿದ್ದು, ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ.

22 ವಯಸ್ಸಿನ ಆರೋಪಿ ಯುವಕ ಕುರುಪೇಟೆಯಲ್ಲಿ ಮೆಕ್ಯಾನಿಕ್‌ ಕೆಲಸ ಮಾಡುತ್ತಿದ್ದ. ಈತ ಮತ್ತು ವಿದ್ಯಾರ್ಥಿನಿ ನಡುವೆ ಕಳೆದ ಒಂದು ವರ್ಷದಿಂದಲೂ ಸಲುಗೆ ಇತ್ತು. ಈಚೆಗೆ ಇಬ್ಬರ ನಡುವೆ ಗಲಾಟೆ ನಡೆದಿದ್ದು, ವಿದ್ಯಾರ್ಥಿನಿ ಯುವಕನ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನಲಾಗಿದೆ.

ADVERTISEMENT

ಬೈಪಾಸ್ ರಸ್ತೆಯಲ್ಲಿ ಯುವಕ ವಿದ್ಯಾರ್ಥಿನಿಯ ಮನವೊಲಿಸಲು ಯತ್ನಿಸಿದ್ದಾನೆ. ಆಕೆ ಒಪ್ಪದಿದ್ದಾಗ ಕಾರ್ ಎಂಜಿನ್ ಶುಚಿಗೊಳಿಸಲು ಬಳಸುತ್ತಿದ್ದ ಆ್ಯಸಿಡ್ ಅನ್ನು ಎರಚಿದ್ದಾನೆ ಎನ್ನಲಾಗಿದೆ. ಕನಕಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.