ADVERTISEMENT

ಕರ್ನಾಟಕ ಜಾನಪದ ಪರಿಷತ್ತು ಲೋಕೋತ್ಸವ: 19 ಮಂದಿಗೆ ‘ಜಾನಪದ ಲೋಕ’ ಪ್ರಶಸ್ತಿ

ರಾಮಚಂದ್ರೇಗೌಡಗೆ ಪ್ರಶಸ್ತಿ ಗರಿ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2026, 21:18 IST
Last Updated 4 ಫೆಬ್ರುವರಿ 2026, 21:18 IST
<div class="paragraphs"><p>ಜಾನಪದ ಲೋಕ:</p></div>

ಜಾನಪದ ಲೋಕ:

   

ರಾಮನಗರ: ಕರ್ನಾಟಕ ಜಾನಪದ ಪರಿಷತ್ತು ಲೋಕೋತ್ಸವ ಪ್ರಯುಕ್ತ ಪ್ರತಿ ವರ್ಷ ನೀಡುವ ‘ಜಾನಪದ ಲೋಕ’ ಪ್ರಶಸ್ತಿಗೆ ಈ ಸಲ ಪರಿಷತ್ತಿನ ಮಾಜಿ ಅಧ್ಯಕ್ಷ, ಜಾನಪದ ವಿದ್ವಾಂಸ ಡಾ. ಪ್ರೊ.ಹಿ. ಶಿ. ರಾಮಚಂದ್ರೇಗೌಡ ಸೇರಿದಂತೆ 19 ಮಂದಿ ಭಾಜನರಾಗಿದ್ದಾರೆ.

ಜಾನಪದ ಲೋಕದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ಪುರಸ್ಕೃತರ ಹೆಸರು ಪ್ರಕಟಿಸಿದ ಪರಿಷತ್ತಿನ ಅಧ್ಯಕ್ಷ ಪ್ರೊ. ಹಿ.ಚಿ. ಬೋರಲಿಂಗಯ್ಯ, ಪ್ರಶಸ್ತಿ ₹10 ಸಾವಿರದಿಂದ ₹25 ಸಾವಿರದವರೆಗೆ ನಗದು ಹಾಗೂ ಫಲಕ ಒಳಗೊಂಡಿದೆ ಎಂದು ಹೇಳಿದರು.

ADVERTISEMENT

ಈ ಸಲ ಫೆ. 7 ಮತ್ತು 8ರಂದು ಜಾನಪದ ಲೋಕದಲ್ಲಿ ವಿದ್ಯಾರ್ಥಿ ಜಾನಪದ ಲೋಕೋತ್ಸವ–2026 ಕಾರ್ಯಕ್ರಮ ನಡೆಯಲಿದೆ. 8ರಂದು ಸಂಜೆ 5.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪರಿಷತ್ತಿನ ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್ ಇದ್ದರು.

ಜಾನಪದ ಲೋಕ ದತ್ತಿ ಪ್ರಶಸ್ತಿ

  • ನಾಡೋಜ ಎಚ್.ಎಲ್. ನಾಗೇಗೌಡ ಜಾನಪದ ಲೋಕಶ್ರೀ ಪ್ರಶಸ್ತಿ: ಪ್ರೊ. ಹಿ.ಶಿ. ರಾಮಚಂದ್ರೇಗೌಡ ಮೈಸೂರು ಜಿಲ್ಲೆ

  • ಡಾ. ಜೀ.ಶಂ. ಪರಮಶಿವಯ್ಯ ಜಾನಪದ ಪ್ರಶಸ್ತಿ: ಪ್ರೊ. ಕೆ. ಚಿನ್ನಪ್ಪಗೌಡ ದಕ್ಷಿಣ ಕನ್ನಡ ಜಿಲ್ಲೆ

  • ನಾಡೋಜ ಡಾ. ಜಿ. ನಾರಾಯಣ ಜಾನಪದ ಲೋಕ ಪ್ರಶಸ್ತಿ: ಗಣೆ ವಾದನ ಕಲಾವಿದ ಚಿಕ್ಕಣ್ಣ ತುಮಕೂರು ಜಿಲ್ಲೆ

  • ಲಕ್ಷ್ಮಮ್ಮ ನಾಗೇಗೌಡ ಪ್ರಶಸ್ತಿ: ಛಾಯಾಗ್ರಾಹಕ ಡಾ. ಸಿರಿಗಂಧ ವಿ. ಶ್ರೀನಿವಾಸಮೂರ್ತಿ ಬೆಂಗಳೂರು

  • ದೊಡ್ಡ ಆಲಹಳ್ಳಿ ಗೌರಮ್ಮ ಕೆಂಪೇಗೌಡ ಪ್ರಶಸ್ತಿ: ಪೂಜಾ ಕುಣಿತ ಕಲಾವಿದ ಶಿವಮಾದಯ್ಯ ಹಾಗೂ ಮೂಡಲಪಾಯ ಯಕ್ಷಗಾನ ಕಲಾವಿದ ಬೈರಪ್ಪ (ಗಂಗಣ್ಣ) ಬೆಂಗಳೂರು ದಕ್ಷಿಣ ಜಿಲ್ಲೆ

  • ಲೋಕ ಸರಸ್ವತಿ ಗ್ರಂಥ ಪ್ರಶಸ್ತಿ: ‘ಸ್ವಾತಂತ್ರ್ಯದ ಕಿಡಿಗಳು’ ಗ್ರಂಥಕ್ಕಾಗಿ ಲೇಖಕ ಹೂಲಿ ಶೇಖರ್ ಬೆಂಗಳೂರು  

ಜಾನಪದ ಲೋಕ ಪ್ರಶಸ್ತಿ

  • ಚಿನ್ನಮ್ಮ ಜೋಗುಳಪದ ಹಾಡುಗಾರ್ತಿ ಚಾಮರಾಜನಗರ ಜಿಲ್ಲೆ

  • ದೇವರಾಜು ಪೂಜಾ ಕುಣಿತ ಕಲಾವಿದ ಮಂಡ್ಯ ಜಿಲ್ಲೆ

  • ನಾರಾಯಣಪ್ಪ ಮಾಡಶಿರಾವಾರ ತತ್ವಪದ ಕಲಾವಿದ ರಾಯಚೂರು ಜಿಲ್ಲೆ

  • ಎಂ. ತಂಬೂರಿ ಸಿದ್ದರಾಜು ತಂಬೂರಿ ಕಲಾವಿದ ಬೆಂಗಳೂರು

  • ಮುತ್ತಪ್ಪ ಬಸವಂತಪ್ಪ ದಾತನಾಳ ಸಾಹಸ ಕಲಾವಿದ ಧಾರವಾಡ ಜಿಲ್ಲೆ

  • ಚನಿಯಪ್ಪ ನಾಯ್ಕ ಯಕ್ಷಗಾನ ವೇಷಧಾರಿ ಕಲಾವಿದ ಕಾಸರಗೋಡು ಕೇರಳ

  • ಶಾರದಮ್ಮ ಸೋಬಾನೆ ಹಾಡುಗಾರ್ತಿ ಚಿಕ್ಕಮಗಳೂರು ಜಿಲ್ಲೆ

  • ಭಾರತಿಬಾಯಿ ಲಂಬಾಣಿ ನೃತ್ಯ ಕಲಾವಿದೆ ಬೀದರ್ ಜಿಲ್ಲೆ

  • ಬಿ.ಎಸ್. ಗೌಡ (ಬೀರಪ್ಪ ಶಿವು ಗೌಡ) ಯಕ್ಷಗಾನ ಕಲಾವಿದ ಉತ್ತರ ಕನ್ನಡ ಜಿಲ್ಲೆ

  • ಡಾ. ಎಸ್. ರತ್ನಮ್ಮ ಸೋಲಿಗ ಕಲಾವಿದೆ ಚಾಮರಾಜನಗರ ಜಿಲ್ಲೆ

  • ಗಂಗಪ್ಪ ಮಹಾಲಿಂಗಪ್ಪ ಕರಡಿ ಕರಡಿ ಮಜಲು ಕಲಾವಿದ ಬಾಗಲಕೋಟೆ ಜಿಲ್ಲೆ

  • ಎಂ. ಬಸವರಾಜು ಗೊರವ ಕುಣಿತ ಕಲಾವಿದ ಬೆಂಗಳೂರು ಉತ್ತರ ಜಿಲ್ಲೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.