ADVERTISEMENT

ಪ್ರೀತಿಗೆ ವಿರೋಧ: ಎಸ್ಸೆಸ್ಸೆಲ್ಸಿ ಓದುವ ಕಾವ್ಯಾ ,ಕಾರು ಚಾಲಕ ಹರೀಶ್ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2021, 4:49 IST
Last Updated 21 ಡಿಸೆಂಬರ್ 2021, 4:49 IST
   

ರಾಮನಗರ: ನಗರ ಹೊರವಲಯದ ಹೆದ್ದಾರಿ ಪಕ್ಕದ ಮರವೊಂದಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಾಮುಂಡೇಶ್ವರಿ ನಗರದ ನಿವಾಸಿ ಹರೀಶ್ (26) ಹಾಗೂ ಗುಡ್ಡದಹಳ್ಳಿ ಗ್ರಾಮದ ಕಾವ್ಯಾ (16) ಮೃತರು.

ಕಾವ್ಯಾ ಎಸ್ಸೆಸ್ಸೆಲ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ಹರೀಶ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಇಬ್ಬರ ಪ್ರೀತಿಗೆ ಮನೆಯಲ್ಲಿ ವಿರೋಧ ಇದ್ದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ADVERTISEMENT

ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ರಾಮನಗರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.