ಬಿಡದಿ: ಬನ್ನಿಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಜರಹಳ್ಳಿಯಲ್ಲಿ ಕೋವಿಡ್-19ನಿಂದ ಹಗಲುರಾತ್ರಿ ಲೆಕ್ಕಿಸದೇ ಸಾರ್ವಜನಿಕರ ಸೇವೆಯಲ್ಲಿ ತೊಡಗಿರುವ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರಿಗೆ ಶನಿವಾರ ಶಾಸಕ ಎ. ಮಂಜುನಾಥ್ ಆಹಾರದ ವಿತರಣೆ ಮಾಡಿದರು.
ನಂತರ ಮಾತನಾಡಿದ ಅವರು, ‘ಕೈಗಾರಿಕಾ ಕಾರ್ಮಿಕರಿಗೆ ಕೋವಿಡ್ನಿಂದ ಕೆಲಸ ಕಾರ್ಯಗಳಿಗೆ ತೊಂದರೆಯಾಗಿದೆ. ಅವರಿಗೆ ತಾತ್ಕಾಲಿಕ ಪರಿಹಾರವಾಗಿ ದಿನಸಿ ಕಿಟ್ ನೀಡಲಾಗುತ್ತಿದೆ’ ಎಂದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಮಾಜಿ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್, ಮುಖಂಡರಾದ ಮಂಜುನಾಥ್, ಗಂಗಣ್ಣ ಗಾಣಕಲ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.