ADVERTISEMENT

ತಿಪ್ಪಸಂದ್ರ ಹೋಬಳಿ ಕೇಂದ್ರದಲ್ಲಿ ಕೋವಿಡ್‌ ಆಸ್ಪತ್ರೆ ಆರಂಭಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 12 ಮೇ 2021, 4:22 IST
Last Updated 12 ಮೇ 2021, 4:22 IST
ಮಾಗಡಿ ತಾಲ್ಲೂಕಿನ ತಿಪ್ಪಸಂದ್ರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಕೋವಿಡ್‌ ಆಸ್ಪತ್ರೆಯನ್ನಾಗಿ ಪರಿವರ್ತಿಸುವಂತೆ ಹೋರಾಟಗಾರ ಗೊರವನಪಾಳ್ಯ ಹರೀಶ್‌, ಗೊಲ್ಲರಹಟ್ಟಿ ದಾಸೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು
ಮಾಗಡಿ ತಾಲ್ಲೂಕಿನ ತಿಪ್ಪಸಂದ್ರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಕೋವಿಡ್‌ ಆಸ್ಪತ್ರೆಯನ್ನಾಗಿ ಪರಿವರ್ತಿಸುವಂತೆ ಹೋರಾಟಗಾರ ಗೊರವನಪಾಳ್ಯ ಹರೀಶ್‌, ಗೊಲ್ಲರಹಟ್ಟಿ ದಾಸೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು   

ಮಾಗಡಿ: ತಾಲ್ಲೂಕಿನ ತಿಪ್ಪಸಂದ್ರ ಹೋಬಳಿಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿದೆ. ಹೋಬಳಿ ಕೇಂದ್ರದಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಕೋವಿಡ್‌ ಆಸ್ಪತ್ರೆಯನ್ನಾಗಿಸಬೇಕು ಎಂದು ಹೋರಾಟಗಾರ ಗೊರವನಪಾಳ್ಯ ಹರೀಶ್‌ ಆಗ್ರಹಿಸಿದರು.

ಭಾನುವಾರ ತಿಪ್ಪಸಂದ್ರದ ಸರ್ಕಾರಿ ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿ ಮಾತನಾಡಿದರು.

ತಿಪ್ಪಸಂದ್ರ ಹೋಬಳಿ ಕೇಂದ್ರದಲ್ಲಿ ಇರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 50 ಹಾಸಿಗೆಗಳ ಅನುಕೂಲವಿದೆ. ಕೊಠಡಿಗಳಿವೆ. ಕೋವಿಡ್‌ ಸೆಂಟರ್‌ ಮಾಡಲು ಸೂಕ್ತವಾಗಿದೆ ಎಂದರು.

ADVERTISEMENT

ತಿಪ್ಪಸಂದ್ರ ಹೋಬಳಿ ತಾಲ್ಲೂಕು ಕೇಂದ್ರದಿಂದ ದೂರದಲ್ಲಿದೆ. ಕೋವಿಡ್‌ ಸೋಂಕಿನಿಂದ ಸಾವುನೋವು ಅಧಿಕವಾಗಿವೆ. ನಮ್ಮ ಹೋಬಳಿಯವರೆ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಹೋಬಳಿ ಜನರಿಗೆ ಅನುಕೂಲ
ಮಾಡಿಕೊಡಲು
ತಿಪ್ಪಸಂದ್ರ ಗ್ರಾಮದಲ್ಲಿ ಕೋವಿಡ್‌ ಆಸ್ಪತ್ರೆ ಆರಂಭಿಸಲು
ಮುಂದಾಗಬೇಕು ಎಂದು ಡಿಸಿಎಂ ಅವರಿಗೆ ಪತ್ರ ಬರೆದು ಮನವಿ ಮಾಡಿರುವುದಾಗಿ ಪಾಳ್ಯದ ಹಳ್ಳಿ ಕಾಡುಗೊಲ್ಲರ ಹಟ್ಟಿ ಮುಖಂಡ ದಾಸೇಗೌಡ ತಿಳಿಸಿದರು.

ಮುಖಂಡ ಬಸವರಾಜು, ರವಿಕುಮಾರ್‌, ಗುಡ್ಡಯ್ಯ, ಶ್ರೀನಿವಾಸ್‌, ಟಿ.ಕೆ.ಶ್ರೀನಿವಾಸ್‌, ರಮೇಶ್‌ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.