ADVERTISEMENT

ಕೆಎಸ್ಆರ್‌ಟಿಸಿ ಬಸ್‌ನಲ್ಲಿ  ಪ್ರಯಾಣದ ವೇಳೆ ಕೆಮ್ಮು: ಆಸ್ಪತ್ರೆಯಲ್ಲಿ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2020, 9:58 IST
Last Updated 21 ಮಾರ್ಚ್ 2020, 9:58 IST

ರಾಮನಗರ: ಅಮೆರಿಕಾದಿಂದ ವಾಪಸ್ ಆದ ವ್ಯಕ್ತಿಯೊಬ್ಬರು ಶನಿವಾರ ಬಸ್ ನಲ್ಲಿ ಪ್ರಯಾಣ ಮಾಡುವ ವೇಳೆ ಕೆಮ್ಮುತ್ತಿದ್ದು, ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಅವರನ್ನು ತಪಾಸಣೆಗೆ ಒಳಪಡಿಸಲಾಯಿತು.

ಬೆಳಗ್ಗೆ ಅಮೆರಿಕಾದಿಂದ ಬೆಂಗಳೂರಿಗೆ ಬಂದಿಳಿದ ವ್ಯಕ್ತಿ‌ ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಗಾಗಿದ್ದರು. ಅವರ ಕೈಗೆ ಸೀಲ್ ಹಾಕಿದ್ದ ವಿಮಾನ ನಿಲ್ದಾಣದ ಸಿಬ್ಬಂದಿ‌ ಖಾಸಗಿ ವಾಹನದಲ್ಲಿ ತೆರಳುವಂತೆ ಸೂಚಿಸಿದ್ದರು.

ಆದರೆ ಆ ವ್ಯಕ್ತಿ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣ ಬೆಳೆಸಿದ್ದರು. ಬಸ್ ನಲ್ಲಿ ಅವರಿಗೆ ಕೆಮ್ಮು ಕಾಣಿಸಿಕೊಂಡಿತು. ಇದನ್ನು ಗುರುತಿಸಿದ ಸಹ ಪ್ರಯಾಣಿಕರು ಅವರನ್ನು ಬಸ್ ನಿಂದ ಇಳಿಸಿ ಆಸ್ಪತ್ರೆಗೆ ತೆರಳುವಂತೆ ಒತ್ತಾಯಿಸಿದರು.

ADVERTISEMENT

ಚನ್ನಪಟ್ಟಣ ಸರ್ಕಾರಿ‌ ಆಸ್ಪತ್ರೆಯಲ್ಲಿ ‌ಮತ್ತೊಮ್ಮೆ ತಪಾಸಣೆಗೆ ಒಳಪಡಿಸಲಾಯಿತು. ಬಳಿಕ ಆತನನ್ನು ಅಲ್ಲಿಂದ ಕಳುಹಿಸಿ ಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.