ಕುದೂರು: ಪಟ್ಟಣದ ಹಿಂದೂ ಮಹಾ ಗಣಪತಿಯನ್ನು ಮಂಗಳವಾರ ಸಂಜೆ ಸಮೀಪದ ಖಾಜಿಪಾಳ್ಯ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.
ಪಟ್ಟಣದ ರಾಮಲೀಲಾ ಕ್ರೀಡಾಂಗಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಮೊದಲನೇ ವರ್ಷದ ಹಿಂದೂ ಮಹಾ ಗಣಪತಿಯನ್ನು ಪ್ರಮುಖ ರಸ್ತೆಗಳಲ್ಲಿ ವಿವಿಧ ಹೂಗಳಿಂದ ಅಲಂಕೃತಗೊಂಡ ವಾಹನದಲ್ಲಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು.
ಯುವಕರು, ಚಿಕ್ಕ ಮಕ್ಕಳು ತಮಟೆ ಸದ್ದಿಗೆ ನರ್ತಿಸಿ ಸಂಭ್ರಮಿಸಿದರು. ಸಿಡಿಮದ್ದು ಪ್ರದರ್ಶನ, ಅನ್ನ ಸಂತರ್ಪಣೆ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.