ರಾಮನಗರ: ಬೆಂಗಳೂರಿನಲ್ಲಿ ಈಚೆಗೆ ನಡೆದ ರೌಡಿಶೀಟರ್ ಲಕ್ಷ್ಮಣ್ ಹತ್ಯೆಗೆ ಬಳಸಿದ್ದ ಕಾರ್ ಹಾಗೂ ಆಯುಧಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹತ್ಯೆಗೆ ಬಳಸಿದ್ದ ಸ್ಕಾರ್ಪಿಯೋ ಕಾರ್ ಅನ್ನು ಮಂಡ್ಯ ಹಾಗೂ ರಾಮನಗರ ಜಿಲ್ಲೆಯ ಗಡಿ ಪ್ರದೇಶವಾದ ಕನಕಪುರ ತಾಲ್ಲೂಕಿನ ಸಾತನೂರು ಹೋಬಳಿಯ ಹೊನ್ನಿಗಾನಹಳ್ಳಿಯಲ್ಲಿ ನಿಲ್ಲಿಸಲಾಗಿತ್ತು. ಮಾಹಿತಿ ಆಧರಿಸಿ ದಾಳಿ ನಡೆಸಿದ ಬೆಂಗಳೂರು ನಗರ ಪೊಲೀಸರು ‘ಕೆ.ಎ–04. ಎಂ.ಬಿ–2253’ ಸಂಖ್ಯೆಯ ಕಾರ್ ಅನ್ನು ವಶಕ್ಕೆ ಪಡೆದರು. ಮೂರು ಲಾಂಗ್ಗಳು ಕಾರ್ನ ಒಳಗೆ ಪತ್ತೆಯಾಗಿವೆ ಎನ್ನಲಾಗಿದೆ.
ಸದ್ಯ ಕಾರ್ ಅನ್ನು ಸಾತನೂರು ಪೊಲೀಸ್ ಠಾಣೆ ಮುಂಭಾಗ ನಿಲ್ಲಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.