ADVERTISEMENT

ಮಾಗಡಿ ಬಳಿ ಚಿರತೆ ದಾಳಿ: ರೈತ ಸಾವು

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2022, 13:24 IST
Last Updated 21 ಸೆಪ್ಟೆಂಬರ್ 2022, 13:24 IST
   

ಮಾಗಡಿ: ತಾಲ್ಲೂಕಿನ ಕಲ್ಲುದೇವನಹಳ್ಳಿ ಗ್ರಾಮದ ರೈತ ಶಿವರಾಮಯ್ಯ (57) ಚಿರತೆ ದಾಳಿಯಿಂದ ಮೃತಪಟ್ಟಿದ್ದಾರೆ.

ಎರಡು ದಿನದ ಹಿಂದೆಯೇ ಈ ಘಟನೆ ನಡೆದಿದ್ದು, ಹೊಲದಲ್ಲಿ ಕೆಲಸ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಚಿರತೆ ದಾಳಿ ನಡೆಸಿ ಶಿವರಾಮಯ್ಯ ಅವರನ್ನು ಎಳೆದೊಯ್ದಿತ್ತು. ಅವರಿಗಾಗಿ ಕುಟುಂಬದವರು ಹುಡುಕಾಟ ನಡೆಸಿದ್ದರು. ಬುಧವಾರ ಮಧ್ಯಾಹ್ನ ಹೊಲದ ಸಮೀಪದ ಬೇಲಿಯಲ್ಲಿ ಅವರ ಶವ ಪತ್ತೆ ಆಯಿತು. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT