ADVERTISEMENT

ರಾಮನಗರ | ಚಿರತೆ ದಾಳಿಗೆ ವೃದ್ಧೆ ಬಲಿ

​ಪ್ರಜಾವಾಣಿ ವಾರ್ತೆ
Published 16 ಮೇ 2020, 3:16 IST
Last Updated 16 ಮೇ 2020, 3:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಮನಗರ: ಮಾಗಡಿ ತಾಲ್ಲೂಕಿನ ಕೊತ್ತಗಾನಹಳ್ಳಿ ಗ್ರಾಮದಲ್ಲಿ ಮನೆಯ ಹೊರಗೆ ಮಲಗಿದ್ಧ ವೃದ್ಧೆ ಮೇಲೆ ಶುಕ್ರವಾರ ರಾತ್ರಿ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ.

ಗಂಗಮ್ಮ (68) ಮೃತರು. ಚಿರತೆ ಮಹಿಳೆಯ ಶವವನ್ನು ಎಳೆದೊಯ್ದಿದ್ದು ಭಾಗಶಃ ತಿಂದು ಹಾಕಿದೆ. ದೇಹದ ಭಾಗಗಳು ಮನೆಯ ಸಮೀಪ ಅಲ್ಲಲ್ಲಿ ಬಿದ್ದಿವೆ. ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ‌ ಮಾಗಡಿ ಪೊಲೀಸರು ಭೇಟಿ ನೀಡಿದ್ದಾರೆ.

ಮಾಗಡಿ ತಾಲ್ಲೂಕಿನ ಕದರಯ್ಯನಪಾಳ್ಯದಲ್ಲಿ ಕಳೆದ ಶನಿವಾರ ಚಿರತೆಯೊಂದು ಮನೆಯೊಳಗೆ ನುಗ್ಗಿ ಮೂರು ವರ್ಷದ ಬಾಲಕನನ್ನು ಎಳೆದೊಯ್ದು ಕೊಂದು ಹಾಕಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿರುವುದು ಜನರಲ್ಲಿ ಆತಂಕ ಮೂಡಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.