ADVERTISEMENT

ಕನಕಪುರ: ಉರುಳಿಗೆ ಸಿಲುಕಿದ ಚಿರತೆ ಸಾವು

​ಪ್ರಜಾವಾಣಿ ವಾರ್ತೆ
Published 22 ಮೇ 2020, 15:17 IST
Last Updated 22 ಮೇ 2020, 15:17 IST
ಉರುಳಿನಲ್ಲಿ ಸಿಲುಕಿಕೊಂಡಿರುವ ಚಿರತೆ
ಉರುಳಿನಲ್ಲಿ ಸಿಲುಕಿಕೊಂಡಿರುವ ಚಿರತೆ   

ಕನಕಪುರ: ಪ್ರಾಣಿ ಬೇಟೆಯಾಡಲು ಹಾಕಿದ್ದ ಉರುಳಿನಲ್ಲಿ ಸಿಲುಕಿ ಚಿರತೆಯೊಂದು ಸಾವನ್ನಪ್ಪಿದೆ. ಉಯಂಬಳ್ಳಿ ಹೋಬಳಿ ಕೋಟೆಕೊಪ್ಪ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಜಮೀನಿನ ಕಡೆ ಹೋದ ರೈತರು ಉರುಳಿಗೆ ಸಿಲುಕಿಕೊಂಡಿರುವ ಚಿರತೆವ ಕಂಡು ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು.

ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ದಿನೇಶ್‌ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬನ್ನೇರುಘಟ್ಟ ನ್ಯಾಷನಲ್‌ ಪಾರ್ಕ್‌ನ ವೈದ್ಯ ಡಾ.ಉಮಾಶಂಕರ್‌ ಮರಣೋತ್ತರ ಪರೀಕ್ಷೆ ನಡೆಸಿ ಹೃದಯಾಘಾತದಿಂದ ಚಿರತೆ ಸಾವನ್ನಪ್ಪಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT