ADVERTISEMENT

ಉರುಳಿಗೆ ಸಿಲುಕಿ ಚಿರತೆ ಸಾವು

​ಪ್ರಜಾವಾಣಿ ವಾರ್ತೆ
Published 11 ಜನವರಿ 2023, 6:51 IST
Last Updated 11 ಜನವರಿ 2023, 6:51 IST
ಪಶು ವೈದ್ಯಾಧಿಕಾರಿ ಹಾಗೂ ಅರಣ್ಯಾಧಿಕಾರಿಗಳ ಸಮ್ಮುಖದಲ್ಲಿ ಚಿರತೆಯ ಅಂತ್ಯಕ್ರಿಯೆ ನಡೆಯಿತು
ಪಶು ವೈದ್ಯಾಧಿಕಾರಿ ಹಾಗೂ ಅರಣ್ಯಾಧಿಕಾರಿಗಳ ಸಮ್ಮುಖದಲ್ಲಿ ಚಿರತೆಯ ಅಂತ್ಯಕ್ರಿಯೆ ನಡೆಯಿತು   

ರಾಮನಗರ: ತಾಲ್ಲೂಕಿನ ಕೂನಗಲ್‌ ಗ್ರಾಮದ ಜಮೀನಿನಲ್ಲಿ ಬೇಟೆಗಾರರು ಹಾಕಿದ್ದ ಉರುಳಿಗೆ ಸಿಲುಕಿ ಮಂಗಳವಾರ ಚಿರತೆಯೊಂದು ಮೃತಪಟ್ಟಿತು.

ಎರಡು ವರ್ಷ ಪ್ರಾಯದ ಗಂಡು ಚಿರತೆ ಆಹಾರ ಅರಸಿ ಜಮೀನಿಗೆ ಬಂದಿದ್ದು, ಈ ವೇಳೆ ಉರುಳಿಗೆ ಸಿಲುಕಿತು. ಅದರ ಚೀರಾಟ ಕೇಳಿ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಆ ಸಂದರ್ಭ ಚಿರತೆ ಜೀವಂತ ಇತ್ತು.

ಸ್ಥಳೀಯವಾಗಿ ಅರವಳಿಕೆ ತಜ್ಞರು ಲಭ್ಯರಿಲ್ಲದ ಕಾರಣ ಬನ್ನೇರುಘಟ್ಟದಿಂದ ತಜ್ಞರನ್ನು ಕರೆಯಿಸುವುದು ತಡವಾಯಿತು. ಹೊಟ್ಟೆ ಭಾಗದಲ್ಲಿ ಉರುಳಿನ ಹಿಡಿತ ಬಿಗಿಯಾಗಿ ಚಿರತೆಯು ವೈದ್ಯರು ಬರುವ ವೇಳೆಗೆ ಸಾವನ್ನಪ್ಪಿತು.

ADVERTISEMENT

ಪಶು ವೈದ್ಯಾಧಿಕಾರಿಗಳು ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಅಂತ್ಯಕ್ರಿಯೆ ನೆರವೇರಿಸಿದರು. ಸ್ಥಳೀಯವಾಗಿ ಅರವಳಿಕೆ ತಜ್ಞರು ಲಭ್ಯರಿದ್ದರೆ ಚಿರತೆಯನ್ನು ರಕ್ಷಿಸಬಹುದಿತ್ತು. ಮುಂದಾದರೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.