ADVERTISEMENT

ರಾಮದೇವರ ಬೆಟ್ಟದಲ್ಲಿ ಆತ್ಮಹತ್ಯೆ ಯತ್ನ: ಪ್ರೇಮಿಗಳ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2023, 12:46 IST
Last Updated 24 ಮಾರ್ಚ್ 2023, 12:46 IST
   

ರಾಮನಗರ: ಇಲ್ಲಿನ ರಾಮದೇವರ ಬೆಟ್ಟದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಪ್ರೇಮಿಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

ಬೆಂಗಳೂರಿನ ಆರ್‌.ಎನ್‌. ಶೆಟ್ಟಿ ಕಾಲೇಜು ಪ್ರಥಮ ಬಿ.ಇ. ವಿದ್ಯಾರ್ಥಿ ಚೇತನ್‌ (19) ಹಾಗೂ ಅದೇ ಕಾಲೇಜಿನ ಪ್ರಥಮ ಬಿ.ಕಾಂ. ವಿದ್ಯಾರ್ಥಿನಿ ಸಾಹಿತ್ಯ (19) ಆತ್ಮಹತ್ಯೆಗೆ ಯತ್ನಿಸಿದವರು. ಬೆಳಿಗ್ಗೆ 11.30ರ ಸುಮಾರಿಗೆ ಬೆಟ್ಟದ ಮೇಲಿಂದ ಜಿಗಿದು ಬಂಡೆಗಳ ಮಧ್ಯೆ ಸಿಲುಕಿ ಗಾಯಗೊಂಡಿದ್ದ ಅವರನ್ನು ಗ್ರಾಮೀಣ ಠಾಣೆ ಇನ್‌ಸ್ಪೆಕ್ಟರ್ ಗಿರಿರಾಜ್‌ ಮತ್ತು ಸಿಬ್ಬಂದಿ ಸುಮಾರು 3 ಗಂಟೆ ಕಾಲ ಕಾರ್ಯಾಚರಣೆ ಮೂಲಕ ರಕ್ಷಣೆ ಮಾಡಿದರು.

ಗಾಯಾಳುಗಳನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿದ್ದು, ಇಬ್ಬರೂ ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.