ರಾಮನಗರ: ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ಮಧ್ಯಾಹ್ನ ನಗರದ ರಾಮದೇವರ ಬೆಟ್ಟದಲ್ಲಿ ನಡೆಯಿತು.
ಬೆಂಗಳೂರಿನ ಶ್ರೀನಗರ ನಿವಾಸಿಗಳಾದ ರಾಕೇಶ್(21) ಹಾಗೂ ಐಶ್ವರ್ಯ (18) ಆತ್ಮಹತ್ಯೆಗೆ ಯತ್ನಿಸಿದವರು. ಈ ಇಬ್ಬರು ಕಳೆದೊಂದು ವರ್ಷದಿಂದ ಪ್ರೀತಿಸುತ್ತಿದ್ದು, ಅಂತರ್ಜಾತಿಯ ಕಾರಣ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ಇಬ್ಬರೂ ಬೆಟ್ಟದಿಂದ ಕೆಳಗೆ ಜಿಗಿದಿದ್ದು, ಯುವಕನ ಕಾಲು ಮುರಿದಿದೆ. ಯುವತಿಯ ಕಾಲು ಹಾಗೂ ತಲೆಗೆ ಪೆಟ್ಟಾಗಿದೆ.
ಪ್ರತ್ಯಕ್ಷದರ್ಶಿಗಳು ಬೆಟ್ಟದಲ್ಲಿನ ಪ್ರವಾಸಿ ಮಿತ್ರ ಸಿಬ್ಬಂದಿಯಾದ ಕುಮಾರ್ ಮತ್ತು ಸವಿತಾ ಅವರಿಗೆ ಮಾಹಿತಿ ನೀಡಿದ್ದು, ಅವರು ಗಾಯಾಳುಗಳನ್ನು ರಕ್ಷಣೆ ಮಾಡಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರು. ರಾಮನಗರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.