ಮಾಗಡಿ:ತಾಲ್ಲೂಕಿನ ಬೆಳಗುಂಬ ಗ್ರಾಮಪಂಚಾಯಿತಿ ವ್ಯಾಪ್ತಿಯ ಭಂಟರ ಕುಪ್ಪೆ ಗ್ರಾಮದಲ್ಲಿಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಭಾನುವಾರ ಬೆಳಿಗ್ಗೆ ಚಿರತೆ ಸೆರೆಯಾಗಿದೆ.
ಸುಮಾರು 3 ವರ್ಷ ವಯಸ್ಸಾಗಿದ್ದು, ಹೆಣ್ಣು ಚಿರತೆಯಾಗಿದೆ. ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ ಎಂದುವಲಯ ಅರಣ್ಯ ಅಧಿಕಾರಿ ಪುಷ್ಪಲತಾ ತಿಳಿಸಿದರು.
ಉಪವಲಯ ಅರಣ್ಯ ಅಧಿಕಾರಿ ಚಿದಾನಂದ್, ಅರಣ್ಯ ರಕ್ಷಕರಾದ ಸಿದ್ದರಾಜು ಆಂಜನಮೂರ್ತಿ, ಚಂದ್ರಶೇಖರ್, ಉಮೇಶ್ ನಾಯ್ಕ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.