ಮಾಗಡಿ: ತಾಲ್ಲೂಕು ಹಾಗೂ ಪಟ್ಟಣದಲ್ಲಿ ಶನಿವಾರ ಸಂಜೆ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದೆ. ಸಂಜೆ ನಾಲ್ಕು ಗಂಟೆಗೆ ಶುರುವಾದ ಭಾರಿ ಗಾಳಿ, ಮಳೆಗೆ ಹಲವು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ವಿದ್ಯುತ್ ತಂತಿಗಳು ತುಂಡಾಗಿ ಬಿದ್ದಿವೆ.
ಪಟ್ಟಣದ ಹಲವು ಬಡಾವಣೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಹೊಸಪೇಟೆಯ ಎಚ್.ಆರ್. ಮಾದೇಶ್ ಅವರ ಮನೆಯ ಮುಂದೆ ನೀಲಗಿರಿ ಮರ ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿ ಹರಿದು ಬಿದ್ದಿದೆ.
ಬಿರುಗಾಳಿ ಸಹಿತ ಮಳೆಗೆ ಮಾಡಬಾಳ್ ಮುಖ್ಯರಸ್ತೆಯಲ್ಲಿ ಮೂರು ವಿದ್ಯುತ್ ಕಂಬ, ಶಂಬುದೇವನಹಳ್ಳಿ, ಉಡುವೆಗೆರೆಯ ಸಮೀಪದ ಬಾಳೆಕಟ್ಟೆ ಹಾಗೂ ಹೊಸಹಳ್ಳಿಯಲ್ಲಿ ಕಂಬಗಳು ನೆಲಕ್ಕೆ ಉರುಳಿವೆ. ಬೆಸ್ಕಾಂ ಸಿಬ್ಬಂದಿ ಕಂಬ ಹಾಗೂ ಹರಿದು ಬಿದ್ದ ವಿದ್ಯುತ್ ತಂತಿ ದುರಸ್ತಿ ಕೆಲಸದಲ್ಲಿ ತೊಡಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.