ADVERTISEMENT

ಗಲಾಟೆ: ಗಾಯಾಳು ಸಾವು

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 2:48 IST
Last Updated 3 ಜುಲೈ 2022, 2:48 IST

ಮಾಗಡಿ: ತಾಲ್ಲೂಕಿನ ಸೋಲೂರು ಬಳಿ ಶುಕ್ರವಾರ ರಾತ್ರಿ ಅಪಘಾತವೊಂದಕ್ಕೆ ಸಂಬಂಧಿಸಿ ಆರಂಭವಾದ ಗಲಾಟೆ ವ್ಯಕ್ತಿಯ ಸಾವಿನಲ್ಲಿ ಅಂತ್ಯವಾಗಿದೆ.

ಬೆಂಗಳೂರಿನ ಆರ್.ಟಿ. ನಗರದ ವೆಲ್ಟಿಂಗ್ ಕಾರ್ಮಿಕ ಸಯ್ಯದ್ ಮಸೂದ್ (36) ಮೃತರು. ಪ್ರಕರಣಕ್ಕೆ ಸಂಬಂಧಿಸಿ ಸೋಲೂರಿನವರಾದ ರಾಘವೇಂದ್ರ, ಬಾಬು ಮತ್ತು ಪ್ರದೀಪ ಎಂಬುವರನ್ನು ಕುದೂರು ಪೊಲೀಸರು ಬಂಧಿಸಿದ್ದಾರೆ. ರಾತ್ರಿ ಬೆಂಗಳೂರು–ಮಂಗಳೂರು ಹೆದ್ದಾರಿಯಲ್ಲಿ ಆರೋಪಿಗಳು ಪ್ರಯಾಣಿಸುತ್ತಿದ್ದ ಕಾರಿಗೆ ಸಯ್ಯದ್ ಬೈಕ್‌ ತಗುಲಿದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿ ಮಾತಿಗೆ ಮಾತು ಬೆಳೆದು ಪರಸ್ಪರ ಕೈಕೈ ಮಿಲಾಯಿಸಿದ್ದಾರೆ. ಇದರಿಂದ ಸಯ್ಯದ್ ತೀವ್ರವಾಗಿ ಗಾಯಗೊಂಡಿದ್ದು, ಸೋಲೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬೆಂಗಳೂರಿನ ನಿಮ್ಹಾನ್ಸ್‌ಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ. ಕುದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT