ಹಾರೋಹಳ್ಳಿ: ತಾಲ್ಲೂಕಿನ ಚಿಕ್ಕಕಲ್ಬಾಳು ಗ್ರಾಮದಲ್ಲಿ ಮಲೈ ಮಹದೇಶ್ವರ ದೇವಸ್ಥಾನ ಪ್ರತಿಷ್ಠಾಪನೆ ಬುಧವಾರ ನಡೆಯಿತು.
ಚಿಕ್ಕಕಲ್ಬಾಳು ಮಠದ ಶಿವಾನಂದ ಶಿವಾಚಾರ್ಯ ಅವರ ನೇತೃತ್ವದಲ್ಲಿ ದೇಗುಲ ಪ್ರತಿಷ್ಠಾಪನೆ ನೆರವೇರಿತು. ಇದರ ಅಂಗವಾಗಿ ಕಳಸರಾಧನೆ, ಮಹಾಗಣಪತಿ ಹೋಮ, ನವಗ್ರಹ ಹೋಮ, ಕುಂಭಾಭಿಷೇಕ ಹಾಗೂ ವಿವಿಧ ಪೂಜಾ ಕಾರ್ಯಗಳು ನೆರವೇರಿದವು.
ಪ್ರತಾಪ್ ಮತ್ತು ತಂಡದಿಂದ ಮಹದೇಶ್ವರ ಕಥೆ ನಡೆಯಿತು. ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.