ADVERTISEMENT

ಮಂಚನಬೆಲೆ ಜಲಾಶಯ ಕ್ರೆಸ್ಟ್ ಗೇಟ್‌ ಗೋಡೆ ಶಿಥಿಲ: ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2019, 13:57 IST
Last Updated 25 ಮಾರ್ಚ್ 2019, 13:57 IST
ಮಾಗಡಿ ತಾಲ್ಲೂಕಿನ ಮಂಚನಬೆಲೆ ಜಲಾಶಯಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯೆ ಚಂದ್ರಮ್ಮನಂಜಯ್ಯ ಭೇಟಿ ನೀಡಿ ಕ್ರೆಸ್ಟ್‌ಗೇಟ್‌ ವೀಕ್ಷಿಸಿದರು
ಮಾಗಡಿ ತಾಲ್ಲೂಕಿನ ಮಂಚನಬೆಲೆ ಜಲಾಶಯಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯೆ ಚಂದ್ರಮ್ಮನಂಜಯ್ಯ ಭೇಟಿ ನೀಡಿ ಕ್ರೆಸ್ಟ್‌ಗೇಟ್‌ ವೀಕ್ಷಿಸಿದರು   

ಮಾಗಡಿ: ಮಂಚನಬೆಲೆ ಜಲಾಶಯದ ಕ್ರೆಸ್ಟ್‌ಗೇಟ್‌ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡು ಶಿಥಿಲಗೊಂಡಿದೆ. ಕಾವೇರಿ ನೀರಾವರಿ ನಿಗಮದ ಎಂಜಿನಿಯರ್‌ಗಳು ಕೂಡಲೇ ದುರಸ್ತಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಚಂದ್ರಮ್ಮ ನಂಜಯ್ಯ ಒತ್ತಾಯಿಸಿದರು.

ಮಂಚನಬೆಲೆ ನಿವಾಸಿಗಳ ಮನವಿ ಮೇರೆಗೆ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು. ತಿಪ್ಪಗೊಂಡನಹಳ್ಳಿ ಜಲಾಶಯ ದುರಸ್ತಿಗೊಳಿಸುವ ಸಲುವಾಗಿ ಇಲ್ಲಿನ ನೀರನ್ನು ಮಂಚನಬೆಲೆ ಜಲಾಶಯಕ್ಕೆ ತುಂಬಿಸಲಾಗಿದೆ. 86ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಹೆಚ್ಚುವರಿಯಾಗಿ ಎರಡು ಟ್ರಸ್ಟ್‌ ಗೇಟ್‌ಗಳ ಮೂಲಕ ನೀರು ಹೊರಗೆ ಹರಿಸಲಾಗುತ್ತಿದೆ. ಇದುವರೆಗೂ ಜಲಾಶಯ ದುರಸ್ತಿಗೊಳಿಸಿಲ್ಲ. ಗೋಡೆಗಳಲ್ಲಿ ದೊಡ್ಡ ಬಿರುಕುಗಳು ಕಾಣಿಸಿಕೊಂಡು ನೀರು ಜಿನುಗುತ್ತಿದೆ. ಈಗಲೇ ಎಚ್ಚೆತ್ತುಕೊಂಡು ದುರಸ್ತಿಗೊಳಿಸಬೇಕು. ಮಂಚನೆಬೆಲೆ ಜಲಾಶಯದ ನೀರು ಕಲುಷಿತಗೊಂಡಿದೆ. ಇದೇ ನೀರನ್ನು ಕುಡಿಯಲು ಸರಬರಾಜು ಮಾಡಲಾಗುತ್ತಿದೆ ಎಂದರು.

ಶುದ್ಧೀಕರಣ: ಮಂಚನಬೆಲೆ ಜಲಾಶಯಕ್ಕೆ ಹೊಸ ಮೋಟಾರು ಅಳವಡಿಸಲಾಗಿದೆ. ನೀರು ಶುದ್ಧೀಕರಿಸಿ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ನಟರಾಜ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.