ADVERTISEMENT

ಮೇಕೆದಾಟು: ಎರಡನೇ ಹಂತದ ಪಾದಯಾತ್ರೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2022, 6:25 IST
Last Updated 27 ಫೆಬ್ರುವರಿ 2022, 6:25 IST
ಟಿ.ಆರ್.‌ ಮಿಲ್ ಮೈದಾನದಲ್ಲಿ ಎರಡನೇ ಹಂತದ ಪಾದಯಾತ್ರೆಗೆ ಚಾಲನೆ
ಟಿ.ಆರ್.‌ ಮಿಲ್ ಮೈದಾನದಲ್ಲಿ ಎರಡನೇ ಹಂತದ ಪಾದಯಾತ್ರೆಗೆ ಚಾಲನೆ   

ರಾಮನಗರ: ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ಒತ್ತಾಯಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಎರಡನೇ ಹಂತದ ಪಾದಯಾತ್ರೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ‌ ಭಾನುವಾರ ಇಲ್ಲಿನ ಟಿ.ಆರ್.‌ ಮಿಲ್ ಮೈದಾನದಲ್ಲಿ ಚಾಲನೆ ನೀಡಿದರು.

ವಿರೋಧ ಪಕ್ಷದ ನಾಯಕ‌ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.‌ ಹರಿಪ್ರಸಾದ್, ಮುಖಂಡರಾದ ರಾಮಲಿಂಗ ರೆಡ್ಡಿ, ಸತೀಶ ಜಾರಕಿಹೊಳಿ, ಧ್ರುವನಾರಾಯಣ, ಈಶ್ವರ ಖಂಡ್ರೆ, ಕೆ.ಎಚ್. ಮುನಿಯಪ್ಪ, ಎಚ್.ಕೆ.‌ ಪಾಟೀಲ, ಆದಿಚುಂಚನಗಿರಿ ಶಾಖಾ‌ ಮಠದ ಅನ್ನದಾನೇಶ್ವರನಾಥ ಸ್ವಾಮೀಜಿ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ.

ಎರಡು ಗಂಟೆ ತಡವಾಗಿ ಕಾರ್ಯಕ್ರಮ ಆರಂಭ ಆಗಿದೆ. ವೇದಿಕೆ ಕಾರ್ಯಕ್ರಮದ ಬಳಿಕ ಇಲ್ಲಿಂದ ಬಿಡದಿಯತ್ತ ಪಾದಯಾತ್ರೆ ಸಾಗಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.