ADVERTISEMENT

ಸೆ.8ರಂದು ಮೇಕೆದಾಟಿಗೆ ಮುತ್ತಿಗೆ: ವಾಟಾಳ್ ನಾಗರಾಜ್‌

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2018, 7:43 IST
Last Updated 31 ಆಗಸ್ಟ್ 2018, 7:43 IST
ಐಜೂರು ವೃತ್ತದಲ್ಲಿ ಶುಕ್ರವಾರ ಸಾಂಕೇತಿಕ ಪ್ರತಿಭಟನೆ ಮಾಡಿದರು.
ಐಜೂರು ವೃತ್ತದಲ್ಲಿ ಶುಕ್ರವಾರ ಸಾಂಕೇತಿಕ ಪ್ರತಿಭಟನೆ ಮಾಡಿದರು.   

ರಾಮನಗರ: ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಆಗ್ರಹಿಸಿ ಸೆಪ್ಟೆಂಬರ್ 8ರಂದು‌ ಮೇಕೆದಾಟು ಮುತ್ತಿಗೆ ಹಮ್ಮಿಕೊಳ್ಳಲಾಗುವುದು ಎಂದು ಕನ್ನಡ ಒಕ್ಕೂಟಗಳ ಅಧ್ಯಕ್ಷ‌ ವಾಟಾಳ್ ನಾಗರಾಜ್‌ಹೇಳಿದರು.

ಇಲ್ಲಿನ ಐಜೂರು ವೃತ್ತದಲ್ಲಿ ಶುಕ್ರವಾರ ಸಾಂಕೇತಿಕ ಪ್ರತಿಭಟನೆ ಮಾಡಿ ಅವರು ಮಾತನಾಡಿದರು. ಈ ಯೋಜನೆಗೆ ತಮಿಳುನಾಡಿನಿಂದ ಯಾವುದೇ ತಕರಾರು ಬರಲಾಗದು. ರಾಜ್ಯ ಸರ್ಕಾರವು ಕೇಂದ್ರಕ್ಕೆ ಈ ಬಗ್ಗೆ ಮನವರಿಕೆ ಮಾಡಿಕೊಟ್ಟು ಯೋಜನೆಗೆ ಶೀಘ್ರ ಚಾಲನೆ ನೀಡಬೇಕು ಎಂದು ಆಗ್ರಹಿಸಿದರು.

ನನ್ನ ಕಾಲದಲ್ಲೇ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಕುಮಾರಸ್ವಾಮಿ ಹೇಳಿರುವುದು ಸ್ವಾಗತಾರ್ಹ. ಸೆ.8ರ ಒಳಗೆ ರಾಜ್ಯ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು. ಕನ್ನಡ ಪರ ಸಂಘಟನೆಗಳ ಸದಸ್ಯರು ಜೊತೆಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.