ADVERTISEMENT

ಹಾಲು ಸಾಗಣೆ ವಾಹನ ಡಿಕ್ಕಿ: ಬಾಲಕ ಸಾವು

​ಪ್ರಜಾವಾಣಿ ವಾರ್ತೆ
Published 24 ಮೇ 2020, 8:20 IST
Last Updated 24 ಮೇ 2020, 8:20 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಮತ್ತಿಕೆರೆ ಬಳಿ ಭಾನುವಾರ ಹಾಲು ಸಾಗಣೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದು ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮಯೂರ್ ಗೌಡ (12) ಮೃತ ಬಾಲಕ. ಬೆಂಗಳೂರು-ಮೈಸೂರು ಹೆದ್ದಾರಿ ಬದಿಯಲ್ಲಿ ನಿಂತಿದ್ದ ಬಾಲಕನಿಗೆ ವಾಹನ‌ ಡಿಕ್ಕಿಯಾಯಿತು. ಅಪಘಾತದ ರಭಸಕ್ಕೆ ಆತ ಸ್ಥಳದಲ್ಲೇ ಸಾವನ್ನಪ್ಪಿದ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT