ADVERTISEMENT

ಚನ್ನಪಟ್ಟಣ: ರಾಮು ಮನೆಗೆ ಸಚಿವ ಯೋಗೇಶ್ವರ್‌ ಭೇಟಿ

​ಪ್ರಜಾವಾಣಿ ವಾರ್ತೆ
Published 25 ಜುಲೈ 2021, 3:51 IST
Last Updated 25 ಜುಲೈ 2021, 3:51 IST
ಚನ್ನಪಟ್ಟಣ ತಾಲ್ಲೂಕಿನ ಮೊಗೇನಹಳ್ಳಿ ಗ್ರಾಮದ ದಿವಂಗತ ರಾಮು ಅವರ ಮನೆಗೆ ಭೇಟಿ ನೀಡಿದ ಸಚಿವ ಸಿ.ಪಿ. ಯೋಗೇಶ್ವರ್ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು
ಚನ್ನಪಟ್ಟಣ ತಾಲ್ಲೂಕಿನ ಮೊಗೇನಹಳ್ಳಿ ಗ್ರಾಮದ ದಿವಂಗತ ರಾಮು ಅವರ ಮನೆಗೆ ಭೇಟಿ ನೀಡಿದ ಸಚಿವ ಸಿ.ಪಿ. ಯೋಗೇಶ್ವರ್ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು   

ಚನ್ನಪಟ್ಟಣ: ಗುರುವಾರ ರಸ್ತೆ ಅಪಘಾತದಲ್ಲಿ ನಿಧನರಾದ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಎಂ. ರಾಮು ಅವರ ಮೊಗೇನಹಳ್ಳಿಯ ಮನೆಗೆ ಶನಿವಾರ ಭೇಟಿ ನೀಡಿದ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಪ್ರೊ.ಎಂ. ನಂಜುಂಡಸ್ವಾಮಿ ಅವರ ಅನುಯಾಯಿಯಾಗಿ ರೈತರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ತಾಲ್ಲೂಕಿನ ರೈತರ ಕಣ್ಮಣಿಯಾಗಿದ್ದ ರಾಮು ಅವರ ನಿಧನ ತಾಲ್ಲೂಕಿಗೆ ತುಂಬಲಾರದ ನಷ್ಟ ಉಂಟು ಮಾಡಿದೆ. ರೈತಪರ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದರು. ಅವರು ಅಕಾಲಿಕವಾಗಿ ಮರಣ ಹೊಂದಿರುವುದು ನಿಜಕ್ಕೂ ದುರಂತ ಎಂದು ಯೋಗೇಶ್ವರ್‌ ವಿಷಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT