ADVERTISEMENT

ಕನಕಪುರ: ಸೊಸೈಟಿಯಲ್ಲಿ ₹ 1.08 ಲಕ್ಷ ಕಳವು

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 4:47 IST
Last Updated 16 ಏಪ್ರಿಲ್ 2022, 4:47 IST

ಕನಕಪುರ: ಸೊಸೈಟಿಯ ಬಾಗಿಲು ಒಡೆದು ಬೀರುವಿನಲ್ಲಿದ್ದ ನಗದುಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೋಡಿಹಳ್ಳಿ ಹೋಬಳಿಯ ಹೇರಿಂದ್ಯಾಪನಹಳ್ಳಿಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಶುಕ್ರವಾರ ಬೆಳಿಗ್ಗೆ ಗುಮಾಸ್ತ ಸೊಸೈಟಿಯ ಕಡೆ ಹೋದಾಗ ಬಾಗಿಲು ಒಡೆದಿರುವುದು ಗೊತ್ತಾಗಿದೆ. ಕೂಡಲೇ, ಸಿಇಒ ಡಿ.ಆರ್‌. ಪರಮೇಶ್‌ ಅವರ ಗಮನಕ್ಕೆ ತಂದಿದ್ದಾರೆ. ಅವರು ಸೊಸೈಟಿ ಭೇಟಿ ನೀಡಿ ಪರಿಶೀಲಿಸಿದಾಗ ದುಷ್ಕರ್ಮಿಗಳು ₹ 1.8 ಲಕ್ಷ ದೋಚಿರುವುದು ಗೊತ್ತಾಗಿದೆ. ಈ ಸಂಬಂಧಕೋಡಿಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಎಸ್‌ಐ ಅನಂತ್‌ರಾಮ್‌ ಬೆರಳಚ್ಚು ತಜ್ಞರ ತಂಡದೊಂದಿಗೆ ಸೊಸೈಟಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.