ADVERTISEMENT

VIDEO: ಇನ್ನಷ್ಟು ನಾಯಕರ ಅಕ್ರಮಗಳು ಶೀಘ್ರ ಬಹಿರಂಗ: ದಿನೇಶ್ ಕಲ್ಲಹಳ್ಳಿ ಬಾಂಬ್

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2021, 12:36 IST
Last Updated 3 ಮಾರ್ಚ್ 2021, 12:36 IST

ರಾಮನಗರ: ರಮೇಶ್ ಜಾರಕಿಹೊಳಿ‌ ರಾಜೀನಾಮೆ ಪಡೆದ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರನ್ನು ದೂರುದಾರ ದಿನೇಶ್ ಕಲ್ಲಹಳ್ಳಿ ಅಭಿನಂದಿಸಿದ್ದಾರೆ. ಇನ್ನಷ್ಟು ಪ್ರಭಾವಿ ನಾಯಕರು, ಸಚಿವರ ಅಕ್ರಮಗಳ ದಾಖಲೆಗಳು ತಮ್ಮ ಬಳಿ‌ ಇದ್ದು, ಸಕಾಲದಲ್ಲಿ ಅದನ್ನು ಬಹಿರಂಗಪಡಿಸುವುದಾಗಿ ಅವರು ತಿಳಿಸಿದ್ದಾರೆ. ಭದ್ರತೆ: ಬೆದರಿಕೆ ಕರೆಗಳ ಹಿನ್ನೆಲೆಯಲ್ಲಿ ತಮಗೆ ಭದ್ರತೆ ನೀಡುವಂತೆ ದಿನೇಶ್ ರಾಮನಗರ ಎಸ್ಪಿಗೆ ವಾಟ್ಸ್ ಆ್ಯಪ್ ಮೂಲಕ ದೂರು ನೀಡಿದ್ದರು. ದೂರು ಆಧರಿಸಿ ಕನಕಪುರ ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ಇರುವ ಅವರ ನಿವಾಸಕ್ಕೆ ಪೊಲೀಸರು ಭದ್ರತೆ‌ ಒದಗಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.