ADVERTISEMENT

ಮುನಿರತ್ನ ವಿರುದ್ಧದ ಆರೋಪ ನಿಜವಾಗಿದ್ದರೆ ಕಾನೂನು ಕ್ರಮ ಎದುರಿಸಲಿ: ಯೋಗೇಶ್ವರ್

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2024, 13:56 IST
Last Updated 15 ಸೆಪ್ಟೆಂಬರ್ 2024, 13:56 IST
<div class="paragraphs"><p>ಸಿ.ಪಿ. ಯೋಗೇಶ್ವರ್</p></div>

ಸಿ.ಪಿ. ಯೋಗೇಶ್ವರ್

   

ರಾಮನಗರ: ‘ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರು ನಿಜವಾಗಿಯೂ ಸಮುದಾಯಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ, ಜಾತಿನಿಂದನೆ ಮಾಡಿದ್ದರೆ ಕಾನೂನು ಕ್ರಮ ಎದುರಿಸಬೇಕು’ ಎಂದು ಸಂಸದ ಡಾ. ಸಿ.ಎನ್. ಮಂಜುನಾಥ್ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಇಬ್ಬರೂ, ‘ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆಡಿಯೊ ತುಣುಕು ಅವರದ್ದೇನಾ ಎಂಬುದು ತನಿಖೆಯಲ್ಲಿ ಗೊತ್ತಾಗಬೇಕಿದೆ. ಅವರದ್ದೇ ಆಗಿದ್ದರೆ ಈ ನೆಲದ ಕಾನೂನು ಪ್ರಕಾರ ಕ್ರಮವಾಗಲಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.