ರಾಮನಗರ: ಚನ್ನಪಟ್ಟಣದ ಮುದಗೆರೆ ಗೇಟ್ ಬಳಿ ಸೋಮವಾರ ಮಧ್ಯಾಹ್ನ ಕಾರೊಂದು ಪಲ್ಟಿಯಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ಮೈಸೂರು ಸಂಸದ ಪ್ರತಾಪ ಸಿಂಹ ನೆರವಾದರು.
ಅಪಘಾತ ಸಂಭವಿಸಿದ ವೇಳೆ ಸಂಸದರು ಹೆದ್ದಾರಿ ಪಕ್ಕದ ಹೋಟೆಲ್ ಒಂದರಲ್ಲಿ ಊಟ ಮಾಡುತ್ತಿದ್ದರು. ಸದ್ದು ಕೇಳಿ ಕೂಡಲೇ ಹೊರಬಂದ ಅವರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ನೆರವಾದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.