ADVERTISEMENT

ಹತ್ಯೆ ಆರೋಪಿಗೆ ಜೀವಾವಧಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2019, 19:46 IST
Last Updated 25 ಏಪ್ರಿಲ್ 2019, 19:46 IST

ರಾಮನಗರ: ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ ಆರೋಪಿಗೆ14 ವರ್ಷ ಜೀವಾವಧಿ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿ ಇಲ್ಲಿನ ಮೂರನೇ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯವು ಬುಧವಾರ ಆದೇಶ ನೀಡಿತು.

ಚನ್ನಪಟ್ಟಣ ನಿವಾಸಿ ನದ್ದು ಅಲಿಯಾಸ್ ನದೀಮ್‌ ಶಿಕ್ಷೆಗೆ ಗುರಿಯಾದವರು. ಪ್ರಕರಣದ ಎರಡನೇ ಆರೋಪಿಯಾಗಿದ್ದ ಮುಜಾಮಿಲ್‌ ಗೆ 1 ವರ್ಷ ಜೈಲು ವಾಸ ಹಾಗೂ ₹500 ದಂಡ ವಿಧಿಸಲಾಗಿದ್ದು, ಮೂರನೇ ಆರೋಪಿ ಸದ್ದಾಂರನ್ನು ನ್ಯಾಯಾಲಯವು ಖುಲಾಸೆ ಮಾಡಿತು.

ಹಿನ್ನೆಲೆ: ಚನ್ನಪಟ್ಟಣದ ಡೈರಾ ಶಾಲೆಯ ಬಳಿ 2017ರ ಸೆಪ್ಟೆಂಬರ್‌ 21ರಂದು ಕಲಾ ನಗರ ನಿವಾಸಿ ಫೈಜಲ್‌ ಎಂಬುವರನ್ನು ಕ್ಷುಲಕ ಕಾರಣಕ್ಕೆ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಚನ್ನಪಟ್ಟಣ ಪೂರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ADVERTISEMENT

ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಗೋಪಾಲಕೃಷ್ಣ ರೈ ಅವರು ಬುಧವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.