ADVERTISEMENT

ಒಂದೇ ದಿನ 161 ಪ್ರಕರಣ ದೃಢ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 15:07 IST
Last Updated 18 ಸೆಪ್ಟೆಂಬರ್ 2020, 15:07 IST
c
c   

ರಾಮನಗರ: ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ 161 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.

ಚನ್ನಪಟ್ಟಣ 53, ಕನಕಪುರ 40, ಮಾಗಡಿ 22 ಮತ್ತು ರಾಮನಗರ 46 ಪ್ರಕರಣಗಳು ಇದರಲ್ಲಿ ಸೇರಿವೆ. ಈ ಪೈಕಿ ಚನ್ನಪಟ್ಟಣ 1188, ಕನಕಪುರ 999, ಮಾಗಡಿ 760 ಮತ್ತು ರಾಮನಗರ 1984 ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 52 ಮಂದಿ ಸೋಂಕಿನಿಂದ ನಿಧನರಾಗಿದ್ದಾರೆ.

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 25, ಕನಕಪುರ ತಾಲ್ಲೂಕಿನಲ್ಲಿ 18, ಮಾಗಡಿ ತಾಲ್ಲೂಕಿನಲ್ಲಿ 27 ಹಾಗೂ ರಾಮನಗರ ತಾಲ್ಲೂಕಿನಲ್ಲಿ 26 ಜನ ಸೇರಿ ಒಟ್ಟಾರೆ 96 ಜನರು ಶುಕ್ರವಾರ ಗುಣಮುಖರಾಗಿದ್ದು, ಕೋವಿಡ್‌ ಆಸ್ಪತ್ರೆಯಿಂದ ಹೊರಬಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 3985 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 948, ಕನಕಪುರ 800, ಮಾಗಡಿ 552 ಮತ್ತು ರಾಮನಗರ 1685 ಜನರು ಸೇರಿದ್ದಾರೆ. ಇನ್ನೂ 894 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.