ADVERTISEMENT

ಕೋವಿಡ್‌ಗೆ ಜಿಲ್ಲೆಯಲ್ಲಿ ಮತ್ತೊಂದು ಬಲಿ

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 14:52 IST
Last Updated 27 ಜೂನ್ 2020, 14:52 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಮನಗರ: ಜಿಲ್ಲೆಯಲ್ಲಿ ಕೋವಿಡ್‌-19 ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದು, ಮೃತರ ಸಂಖ್ಯೆ ಐದಕ್ಕೆ ಏರಿಕೆ ಆಗಿದೆ.

ಮಾಗಡಿಯ ಗಾಡಿ ವೆಂಕಟಪ್ಪ ಗಲ್ಲಿಯ 40 ವರ್ಷದ ವ್ಯಕ್ತಿಯೊಬ್ಬರು ಕ್ವಾರಂಟೈನ್‌ ಕೇಂದ್ರವೊಂದರಲ್ಲಿ ಇದ್ದರು. ಅವರಿಗೆ ಪಾಸಿಟಿವ್‌ ಕಂಡುಬಂದ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ಆಸ್ಪತ್ರೆ ಹಾಗೂ ತರುವಾಯ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಶನಿವಾರ ಕೊನೆಯುಸಿರೆಳೆದರು ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಮಾಗಡಿಯ ಗದ್ದೆಬೈಲು ಪ್ರದೇಶದ ಮಹಿಳೆಯೊಬ್ಬರಿಗೂ ಸೋಂಕು ತಗುಲಿದೆ ಎನ್ನಲಾಗಿದೆ. ಕೆಲ ದಿನಗಳ ಹಿಂದೆ ಈ ಮಹಿಳೆ ಸ್ವಯಂಪ್ರೇರಿತವಾಗಿ ತಪಾಸಣೆಗೆ ಬಂದಿದ್ದರು. ಆದರೆ ಆರೋಗ್ಯ ಇಲಾಖೆ ಇದನ್ನು ಅಧಿಕೃತವಾಗಿ ಖಚಿತಪಡಿಸಿಲ್ಲ.

ADVERTISEMENT

ಆರೋಗ್ಯ ಇಲಾಖೆಯ ಶನಿವಾರದ ಬುಲೆಟಿನ್‌ ಮಾಹಿತಿಯಂತೆ ಈ ದಿನ ಜಿಲ್ಲೆಯ ಯಾರೊಬ್ಬರಿಗೂ ಸೋಂಕು ತಗುಲಿಲ್ಲ. 178 ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಇದೂ ಸೇರಿದಂತೆ 1263 ಮಂದಿಯ ಪರೀಕ್ಷಾ ವರದಿ ಬರುವುದು ಬಾಕಿ ಇದೆ. ಶನಿವಾರ ಜಿಲ್ಲೆಯ ಕೋವಿಡ್‌ ಆಸ್ಪತ್ರೆಯಿಂದ 14 ಮಂದಿಯನ್ನು ವಿಕ್ಟೋರಿಯಾ ಮೊದಲಾದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಈ ದಿನ ಇಬ್ಬರು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಗುಣಮುಖರಾದವರ ಸಂಖ್ಯೆ 21ಕ್ಕೆ ಏರಿದೆ. 78 ಮಂದಿ ರಾಮನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.