ADVERTISEMENT

ಅಪಘಾತದಲ್ಲಿ ವ್ಯಕ್ತಿ ಸಾವು: ಅಂಗಾಂಗ ದಾನ

​ಪ್ರಜಾವಾಣಿ ವಾರ್ತೆ
Published 16 ಮೇ 2019, 14:34 IST
Last Updated 16 ಮೇ 2019, 14:34 IST
ಮಲ್ಲೇಶ್‌
ಮಲ್ಲೇಶ್‌   

ರಾಮನಗರ: ಬಿಡದಿ ಬಳಿ ಈಚೆಗೆ ಅಪಘಾತಕ್ಕೀಡಾಗಿ ಮೃತಪಟ್ಟ ಮಲ್ಲೇಶ್‌ ರೆಡ್ಡಿ (38) ಅವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಅವರ ಕುಟುಂಬಸ್ಥರು ನೋವಿನಲ್ಲೂ ಮಾನವೀಯತೆ ಮೆರೆದಿದ್ದಾರೆ.

ಭಾನುವಾರ ಸಂಜೆ ಕಂಚುಗಾರನಹಳ್ಳಿ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬೈಕ್‌ ಡಿಕ್ಕಿಯಾಗಿ ಮಲ್ಲೇಶ್ ತೀವ್ರವಾಗಿ ಗಾಯಗೊಂಡಿದ್ದರು. ಇದರಿಂದಾಗಿ ಅವರ ಮಿದುಳು ನಿಷ್ಕ್ರಿಯಗೊಂಡಿತು. ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಅವರು ಮಂಗಳವಾರ ಕೊನೆಯುಸಿರೆಳೆದರು. ಮಲ್ಲೇಶ್‌ ಬದುಕುಳಿಯುವ ಸಾಧ್ಯತೆ ಕಡಿಮೆ ಎಂದು ಅರಿತ ಅವರ ಕುಟುಂಬಸ್ಥರು ಅವರ ಕಣ್ಣು, ಕಿಡ್ನಿ, ಹೃದಯ, ಪಿತ್ತಜನಕಾಂಗ (ಲೀವರ್)ಗಳನ್ನು ದಾನ ಮಾಡಿದರು.

ಅವರಿಗೆ ಪತ್ನಿ ಅರುಣಾ, ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಕೆಂಪಯ್ಯನಪಾಳ್ಯದಲ್ಲಿ ಬುಧವಾರ ಅಂತ್ಯಕ್ರಿಯೆ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.