ADVERTISEMENT

ಪಾಲಭೋವಿದೊಡ್ಡಿ ಗ್ರಾಮದ ಚಿಕ್ಕಮ್ಮ ದೇವಸ್ಥಾನದ ಹುಂಡಿ ಕಳವು

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2022, 7:22 IST
Last Updated 7 ಅಕ್ಟೋಬರ್ 2022, 7:22 IST
   

ರಾಮನಗರ: ತಾಲ್ಲೂಕಿನ ಪಾಲಭೋವಿದೊಡ್ಡಿ ಗ್ರಾಮದ ಚಿಕ್ಕಮ್ಮ ದೇವಸ್ಥಾನದ ಹುಂಡಿಯಲ್ಲಿ‌ನ ಹಣವನ್ನು ಗುರುವಾರ ರಾತ್ರಿ ಕಳ್ಳರು ದೋಚಿದ್ದಾರೆ.

ಬಾಗಿಲಿನ ಬೀಗ ಹಾಕಿದಂತೆ ಇದ್ದು, ಶುಕ್ರವಾರ ಬೆಳಿಗ್ಗೆ ಅರ್ಚಕರು ದೇಗುಲಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಕಿಟಕಿ ಸರಳುಗಳನ್ನು ಮುರಿದು ಒಳಹೋಗಲು ಕಳ್ಳರು ಯತ್ನಿಸಿದ್ದು, ಅದು ಸಾಧ್ಯವಾಗದಿದ್ದಾಗ ನಕಲಿ ಕೀ ಬಳಸಿ ಬಾಗಿಲು ತೆರೆದು ಹುಂಡಿ ಒಡೆದು ಹಣ ದೋಚಿದ್ದಾರೆ ಎನ್ನಲಾಗಿದೆ.

ದೇಗುಲದಲ್ಲಿನ ಹುಂಡಿಯನ್ನು 2015ರಲ್ಲಿ ಕಡೆಯ ಬಾರಿಗೆ ತೆಗೆಯಲಾಗಿತ್ತು. ಕಳೆದ ಏಳು ವರ್ಷದಿಂದ ಅದನ್ನು ತೆರೆದಿರಲಿಲ್ಲ. ಹೀಗಾಗಿ ಲಕ್ಷಾಂತರ ರೂಪಾಯಿ ಸಂಗ್ರಹ ಆಗಿತ್ತು ಎನ್ನಲಾಗಿದೆ.

ADVERTISEMENT

ಇದೇ ಗ್ರಾಮದ ಮಹದೇಶ್ವರ- ಶನೇಶ್ವರ ದೇಗುಲದಲ್ಲಿಯೂ ಕಳವಿಗೆ ವಿಫಲ ಯತ್ನ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.