ADVERTISEMENT

ಕೆಮ್ಮುತ್ತಿದ್ದ ವ್ಯಕ್ತಿಯನ್ನು ಬಸ್‌ನಿಂದ ಕೆಳಗಿಳಿಸಿದ ಸಹ ಪ್ರಯಾಣಿಕರು !

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2020, 14:32 IST
Last Updated 21 ಮಾರ್ಚ್ 2020, 14:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚನ್ನಪಟ್ಟಣ: ಸರ್ಕಾರಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕೆಮ್ಮುತ್ತಿದ್ದದ್ದನ್ನು ಗಮನಿಸಿದ ಸಹ ಪ್ರಯಾಣಿಕರು ಆಕ್ಷೇಪ ವ್ಯಕ್ತಪಡಿಸಿ ಅವರನ್ನು ಬಲವಂತವಾಗಿ ಕೆಳಗಿಳಿಸಿದ ಘಟನೆ ಇಲ್ಲಿನ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮೂಲತಃ ನಂಜನಗೂಡಿನವರಾದ ವ್ಯಕ್ತಿ ಮೈಸೂರಿನ ನೆಸ್ಲೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕಾರ್ಯ ನಿಮಿತ್ತ ಅಮೆರಿಕಗೆ ತೆರಳಿದ್ದ ಅವರು ಶನಿವಾರ ಬೆಳಿಗ್ಗೆ ಬೆಂಗಳೂರಿಗೆ ವಾಪಸಾಗಿದ್ದರು. ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸಿದ ಸಿಬ್ಬಂದಿ, ಖಾಸಗಿ ವಾಹನ ಮಾಡಿಕೊಂಡು ತೆರಳುವಂತೆ ಸೂಚನೆ ನೀಡಿದ್ದರು.

’ಅವರಿಗೆ ಯಾವುದೇ ಕೊರೊನಾ ವೈರಸ್ ಸೋಂಕು ಇಲ್ಲ. ಅವರ ಕೈಮೇಲೆ ವಿಮಾನ ನಿಲ್ದಾಣ ಅಧಿಕಾರಿಗಳು ಹಾಕಿದ್ದ ಮುದ್ರೆ ನೋಡಿದ ಸಹ ಪ್ರಯಾಣಿಕರು ಭೀತಿಗೊಂಡಿದ್ದರಿಂದ ಈ ಅವಾಂತರ ಸೃಷ್ಟಿಯಾಗಿದೆ. ಅವರನ್ನು ನಂಜನಗೂಡು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ‘ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಜು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.