ಚನ್ನಪಟ್ಟಣ: ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಮಹಿಳೆ ನವಿಲುವೊಂದರ ವಿರುದ್ಧ ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.
ಗ್ರಾಮದ ಲಿಂಗಮ್ಮ ಎಂಬುವರು ‘ನವಿಲೊಂದು ನನ್ನ ಮೇಲೆ ಪದೇ ಪದೇ ದಾಳಿ ಮಾಡುತ್ತಿದ್ದು ಗಾಯಗಳಾಗಿವೆ. ಅದನ್ನು ಸೆರೆ ಹಿಡಿಯಬೇಕು’ ಎಂದು ಅರಣ್ಯ ಇಲಾಖೆಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಜೂ.26ರಂದು ಮನೆ ಹಿಂಭಾಗ ಕೆಲಸ ಮಾಡುವ ಸಂದರ್ಭದಲ್ಲಿ ನನ್ನ ಮೇಲೆ ದಾಳಿ ಮಾಡಿ ಗಾಯಗೊಳಿಸಿತು. ದಾಳಿಯಿಂದ ಆಗಿರುವ ಗಾಯಕ್ಕೆ ತಾಲ್ಲೂಕಿನ ಬಿ.ವಿ.ಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.