ADVERTISEMENT

ಆನೆ ದಾಳಿ: ವೃದ್ಧ ಸಾವು

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2020, 13:24 IST
Last Updated 17 ಅಕ್ಟೋಬರ್ 2020, 13:24 IST
ಮುತ್ತಯ್ಯ
ಮುತ್ತಯ್ಯ   

ಕನಕಪುರ: ತಾಲ್ಲೂಕಿನ ತೇರುಬೀದಿ ಗ್ರಾಮದ ಬಳಿ ಶನಿವಾರ ಮಧ್ಯಾಹ್ನ ಕಾಡಾನೆ ದಾಳಿಯಿಂದ ಮುತ್ತಯ್ಯ (60) ಎಂಬ ವ್ಯಕ್ತಿ ಮೃತಪಟ್ಟರು.

ಮುತ್ತಯ್ಯ ಬೆಳಗ್ಗೆ ಹಸುಗಳನ್ನು ಮೇಯಿಸಲು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಬಂಟನಾಳ ಅರಣ್ಯ ಪ್ರದೇಶದ ಅಂಚಿಗೆ ತೆರಳಿದ್ದರು. ಮಧ್ಯಾಹ್ನ ಅಲ್ಲಿಂದ ವಾಪಾಸ್ ಆಗುವ ವೇಳೆ ಆನೆಯು ಏಕಾಏಕಿ ದಾಳಿ ನಡೆಸಿತು. ಪ್ರತ್ಯಕ್ಷದರ್ಶಿಗಳು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದು, ಹಾರೋಹಳ್ಳಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT