ADVERTISEMENT

ಚನ್ನಪಟ್ಟಣ | ರಸ್ತೆ ಇಕ್ಕೆಲಗಳಲ್ಲಿ ಗಿಡಗಂಟಿ: ವಾಹನ ಸವಾರರಿಗೆ ಕಿರಿಕಿರಿ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2024, 5:34 IST
Last Updated 30 ಸೆಪ್ಟೆಂಬರ್ 2024, 5:34 IST
ಚನ್ನಪಟ್ಟಣ ತಾಲ್ಲೂಕಿನ ಮಂಗಾಡಹಳ್ಳಿ ಕೆರೆ ಏರಿ ರಸ್ತೆ ಇಕ್ಕೆಲಗಳಲ್ಲಿ ಬೆಳೆದಿರುವ ಗಿಡಗಂಟಿ
ಚನ್ನಪಟ್ಟಣ ತಾಲ್ಲೂಕಿನ ಮಂಗಾಡಹಳ್ಳಿ ಕೆರೆ ಏರಿ ರಸ್ತೆ ಇಕ್ಕೆಲಗಳಲ್ಲಿ ಬೆಳೆದಿರುವ ಗಿಡಗಂಟಿ   

ಚನ್ನಪಟ್ಟಣ: ತಾಲ್ಲೂಕಿನ ಕೋಡಂಬಹಳ್ಳಿ ಹಾಗೂ ಮಂಗಾಡಹಳ್ಳಿ ಗ್ರಾಮಗಳ ಕೆರೆ ಏರಿ ರಸ್ತೆ ಇಕ್ಕೆಲಗಳಲ್ಲಿ ಗಿಡಗಂಟಿ ಬೆಳೆದು ವಾಹನ ಸವಾರರಿಗೆ ಕಿರಿಕಿರಿ ಎದುರಾಗಿದೆ ಎಂದು ಮುಖಂಡ ಕೋಡಂಬಹಳ್ಳಿ ನಾಗರಾಜು ಆರೋಪಿಸಿದ್ದಾರೆ.

ಚನ್ನಪಟ್ಟಣ ಹಲಗೂರು ಮುಖ್ಯರಸ್ತೆಯಾಗಿರುವ ಈ ಕೆರೆ ಏರಿ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ವಾಹನ ಸಂಚರಿಸುತ್ತವೆ. ಹಲವು ದಿನಗಳಿಂದ ರಸ್ತೆ ಇಕ್ಕೆಲಗಳಲ್ಲಿ ಗಿಡಗಂಟಿ ಬೆಳೆದಿದೆ. ಇದರಿಂದ ರಸ್ತೆ ಕಿರಿದಾಗಿದೆ. ಜತೆಗೆ ಅಲ್ಲಲ್ಲಿ ತಿರುವು ಇರುವ ಕಾರಣ ಎದುರಿನಿಂದ ಬರುವ ವಾಹನಗಳು ಕಾಣಿಸುವುದಿಲ್ಲ. ಸಣ್ಣಪುಟ್ಟ ಅಪಘಾತ ಸಂಭವಿಸಿ ತೊಂದರೆಯಾಗುತ್ತಿದೆ ಎಂದು ದೂರಿದ್ದಾರೆ.

ಇದೇ ರೀತಿ ರಸ್ತೆ ಇಕ್ಕೆಲಗಳಲ್ಲಿ ಗಿಡಗಂಟಿ ಬೆಳೆದು ವಾಹನ ಸವಾರರಿಗೆ ತೊಂದರೆಯಾಗಿದೆ. ಅಧಿಕಾರಿಗಳು ಗಮನ ಸೆಳೆದರೂ ಪ್ರಯೋಜನವಾಗಿರಲಿಲ್ಲ. ಮಂಗಾಡಹಳ್ಳಿ ಮುಖಂಡ ಎಂ.ಜೆ.ಮಹೇಶ್ ಸ್ವಂತ ಹಣದಲ್ಲಿ ಜೆಸಿಬಿ ಮೂಲಕ ಗಿಡಗಂಟಿ ತೆರವುಗೊಳಿಸಿ ವಾಹನ ಸವಾರರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ADVERTISEMENT

ಗಮನಹರಿಸಿ ಶೀಘ್ರ ಗಿಡಗಂಟಿ ತೆರವುಗೊಳಿಸಬೇಕು ಎಂದು ಸ್ಥಳೀಯರಾದ ಕೆ.ಎಸ್.ನಾಗರಾಜು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.