ADVERTISEMENT

ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 12 ಮೇ 2023, 9:55 IST
Last Updated 12 ಮೇ 2023, 9:55 IST

ಹಾರೋಹಳ್ಳಿ: ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಯೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದೆ. 

ಹಲ್ಲೆ ನಡೆಸಿದ ಆರೋಪಿಯನ್ನು ಅರೆಕಡುಕಲು ಗ್ರಾಮದ ವಿಜಯ್ ಕುಮಾರ್ ಎಂದು ಗುರಿತಿಸಲಾಗಿದೆ. 

ಗೋದುರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 198ನೇ ಮತಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ವ್ಯಕ್ತಿಯೊಬ್ಬರು ಕೂಗಾಡುತ್ತಿದ್ದರು. ಈ ವೇಳೆ ಚುನಾವಣಾ ಕರ್ತವ್ಯದಲ್ಲಿದ್ದ ಆದರ್ಶ ಎಂಬ ಪೊಲೀಸ್ ಸಿಬ್ಬಂದಿ ಮತಗಟ್ಟೆಯ ಸಮೀಪ ಕೂಗಾಡಬಾರದು ಎಂದು ಹೇಳಿ ಹೇಳಿ ಕಳುಹಿಸಿದ್ದರು. ಇದಾದ ಕೆಲ ಹೊತ್ತಿನ ಬಳಿಕ ದ್ವಿಚಕ್ರವಾಹನದಲ್ಲಿ ಬಂದು, ಹಲ್ಲೆ ನಡೆಸಿದ್ದಾನೆ. ಇದರಿಂದ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.