ADVERTISEMENT

ಡಿಕೆಶಿ ಬಿಡುಗಡೆಗೆ ಪ್ರಾರ್ಥಿಸಿ ಹೋಮ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2019, 3:58 IST
Last Updated 25 ಸೆಪ್ಟೆಂಬರ್ 2019, 3:58 IST
ಕನಕಪುರ ನಗರದ ಕಾಳಮ್ಮ ದೇವಾಲಯದಲ್ಲಿ ನಡೆದ ವಿಶ್ವಕರ್ಮ ಜಯಂತಿಯಲ್ಲಿ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು
ಕನಕಪುರ ನಗರದ ಕಾಳಮ್ಮ ದೇವಾಲಯದಲ್ಲಿ ನಡೆದ ವಿಶ್ವಕರ್ಮ ಜಯಂತಿಯಲ್ಲಿ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು   

ಕನಕಪುರ: ನಗರದ ಬಸ್‌ ನಿಲ್ದಾಣದ ಪಕ್ಕದಲ್ಲಿರುವ ಶಕ್ತಿ ದೇವತೆ ಕಾಳಮ್ಮ ದೇವಿಯ ದೇವಸ್ಥಾನದಲ್ಲಿ ತಾಲ್ಲೂಕು ವಿಶ್ವಕರ್ಮ ಸಮಾಜದ ವತಿಯಿಂದ 'ವಿಶ್ವಕರ್ಮ ಜಯಂತಿ' ನಡೆಯಿತು.

ವಿಶ್ವಕರ್ಮ ಸಮಾಜದ ತಾಲ್ಲೂಕು ಅಧ್ಯಕ್ಷ ಶಿವರಾಮಚಾರ್‌ ಮಾತನಾಡಿ, ‘ರಾಜ್ಯದಲ್ಲಿ ನೆರೆ ಹಾವಳಿಯಿಂದ ಉತ್ತರ ಕರ್ನಾಟಕದ ಜನತೆ ಸಂಕಷ್ಟದಲ್ಲಿದ್ದಾರೆ. ಕ್ಷೇತ್ರದ ಶಾಸಕ ಡಿ.ಕೆ.ಶಿವಕುಮಾರ್‌ ಅವರು ಇ.ಡಿ ಬಂಧನದಲ್ಲಿದ್ದಾರೆ. ಇದು ಸಮಾಜದ ಜನರಿಗೆ ನೋವಿನ ಸಂದರ್ಭವಾಗಿದ್ದು ವಿಶ್ವಕರ್ಮ ಜಯಂತಿಯನ್ನು ಸರಳವಾಗಿ ಆಚರಿಸಿದ್ದೇವೆ. ಜತೆಗೆ ಶಿವಕುಮಾರ್‌ ಅವರು ಆದಷ್ಟು ಬೇಗ ಎಲ್ಲ ಸಂಕಷ್ಟಗಳಿಂದ ಹೊರಬರಬೇಕೆಂದು ಕಾಳಮ್ಮ ದೇವಾಲಯದಲ್ಲಿ ಹೋಮ ಮಾಡಿದ್ದೇವೆ’ ಎಂದು ತಿಳಿಸಿದರು.

ದೇವಾಲಯದಲ್ಲಿ ಜಯಂತಿ ಆಚರಣೆಯ ನಂತರ ಹೋಮ ನಡೆಸಿ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ADVERTISEMENT

ಸಮಾಜದ ಪ್ರಧಾನ ಕಾರ್ಯದರ್ಶಿ ಜಯರಾಮಚಾರಿ, ಆಡಳಿತ ಮಂಡಳಿಯ ನಿರ್ದೇಶಕರು, ಸಂಘದ ಸದಸ್ಯರು, ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.